Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ರಾಜಕೀಯ ಪಾದಯಾತ್ರೆ ಮಾಡುತ್ತಿದೆ : ಸಿಎಂ ಬೊಮ್ಮಾಯಿ‌

Facebook
Twitter
Telegram
WhatsApp

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇಂದು ಚಾಲನೆ ನೀಡಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಇದು ರಾಜಕೀಯ ಪಾದಯಾತ್ರೆ ಅಷ್ಟೆ. ಐದು ವರ್ಷ ಅವ್ರೇ ಅಧಿಕಾರದಲ್ಲಿದ್ದರು. ಆಗ ಏನನ್ನು ಮಾಡಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಡಿಕೆಶಿ ನೀರಾವರಿ ಸಚಿವರಾಗಿದ್ದರು. ಆಗಲು ಏನು ಮಾಡಲಿಲ್ಲ. ಈ ಸಂಬಂಧ ಕಳೆದ ಮೂರು ವರ್ಷದಿಂದ ಎಲ್ಲಿಯೂ ಚರ್ಚೆಯಾಗಲಿಲ್ಲ.

ಕಾಂಗ್ರೆಸ್ ಪಕ್ಷ ಈ ಪಾದಯಾತ್ರೆಯನ್ನ ಯಾಕೆ ಮಾಡುತ್ತಿದೆ ಅನ್ನೋದು ಈಗಾಗಲೇ ಗೊತ್ತಿದೆ. ಅಧಿಕಾರದಲ್ಲಿದ್ದಾಗ ಸರಿಯಾಗಿ ಡಿಪಿಆರ್ ಮಾಡಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿದ್ದಾಗ ಡಿಪಿಆರ್ ಮಾಡಿದ್ದರು ಆದ್ರೆ ಅವರಿಗೆ ಬದ್ಧತೆ ಇರಲಿಲ್ಲ. ಚುನಾವಣೆ ಹತ್ತಿರ ಬಂದಿದೆ ಅಂತ ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ. ಬಹುತೇಕ ತಾವು ಕೆಲಸವನ್ನ ಮಾಡಿಲ್ಲ ಎಂಬ ಅಪರಾಧ ಅವರಿಗೆ ಕಾಡುತ್ತಿದೆ. ನೀರಾವರಿ ಯೋಜನೆ ಬಗ್ಗೆ ಬದ್ಧತೆಯಿಂದ ಕೆಲಸ ಮಾಡೋದನ್ನ ಬಿಟ್ಟು, ಜನರನ್ನ ಮರಳು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

error: Content is protected !!