ಕಾಂಗ್ರೆಸ್ ರಾಜಕೀಯ ಪಾದಯಾತ್ರೆ ಮಾಡುತ್ತಿದೆ : ಸಿಎಂ ಬೊಮ್ಮಾಯಿ‌

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇಂದು ಚಾಲನೆ ನೀಡಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಇದು ರಾಜಕೀಯ ಪಾದಯಾತ್ರೆ ಅಷ್ಟೆ. ಐದು ವರ್ಷ ಅವ್ರೇ ಅಧಿಕಾರದಲ್ಲಿದ್ದರು. ಆಗ ಏನನ್ನು ಮಾಡಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಡಿಕೆಶಿ ನೀರಾವರಿ ಸಚಿವರಾಗಿದ್ದರು. ಆಗಲು ಏನು ಮಾಡಲಿಲ್ಲ. ಈ ಸಂಬಂಧ ಕಳೆದ ಮೂರು ವರ್ಷದಿಂದ ಎಲ್ಲಿಯೂ ಚರ್ಚೆಯಾಗಲಿಲ್ಲ.

ಕಾಂಗ್ರೆಸ್ ಪಕ್ಷ ಈ ಪಾದಯಾತ್ರೆಯನ್ನ ಯಾಕೆ ಮಾಡುತ್ತಿದೆ ಅನ್ನೋದು ಈಗಾಗಲೇ ಗೊತ್ತಿದೆ. ಅಧಿಕಾರದಲ್ಲಿದ್ದಾಗ ಸರಿಯಾಗಿ ಡಿಪಿಆರ್ ಮಾಡಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿದ್ದಾಗ ಡಿಪಿಆರ್ ಮಾಡಿದ್ದರು ಆದ್ರೆ ಅವರಿಗೆ ಬದ್ಧತೆ ಇರಲಿಲ್ಲ. ಚುನಾವಣೆ ಹತ್ತಿರ ಬಂದಿದೆ ಅಂತ ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ. ಬಹುತೇಕ ತಾವು ಕೆಲಸವನ್ನ ಮಾಡಿಲ್ಲ ಎಂಬ ಅಪರಾಧ ಅವರಿಗೆ ಕಾಡುತ್ತಿದೆ. ನೀರಾವರಿ ಯೋಜನೆ ಬಗ್ಗೆ ಬದ್ಧತೆಯಿಂದ ಕೆಲಸ ಮಾಡೋದನ್ನ ಬಿಟ್ಟು, ಜನರನ್ನ ಮರಳು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

2 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

5 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

6 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

12 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

21 hours ago