ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ‌

suddionenews
1 Min Read

ಕೋಲಾರ: ಅಕಾಲಿಕ ಮಳೆಯಿಂದಾಗಿ ರೈತ ಅಕ್ಷರಶಃ ನಲುಗಿ ಹೋಗಿದ್ದಾನೆ. ಮಳೆಯಿಂದಾಗಿ ಬೆಳೆದ ಬೆಳೆ ಸಂಪೂರ್ಣವಾಗಿ ಹಾಳಾಗಿದೆ. ಕೈಗೆ ಬರಬೇಕಾದ ಬೆಳೆ ಜಮೀನಿನಲ್ಲೇ ಮೊಳಕೆ ಹೊಡೆದಿದೆ. ರೈತರ ಕಷ್ಟಗಳನ್ನ ಆಲಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ರೈತರ ಜಮೀನುಗಳಿಗೆ ಭೇಟಿ ನೀಡಿದ್ದಾರೆ.

ಕೋಲಾರ ಜಿಲ್ಲೆಯ ನರಸಾಪುರ, ಚೌಡದೇನಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಸಿಎಂ ಭೇಟಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ, ಶಾಸಕ ಶ್ರೀನಿವಾಸ ಗೌಡ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ದಾರೆ.

ರೈತರ ಜಮೀನುಗಳಿಗೆ ಭೇಟಿ ನೀಡಿ ಅಲ್ಲಿನ ಬೆಳೆಹಾನಿಯನ್ನು ಪರಿಶೀಲಿಸಿದ್ದಾರೆ. ಮೊಳಕೆ ಹೊಡೆದ ಬೆಳೆಗಳನ್ನು ನೋಡಿದ್ದಾರೆ. ರೈತರಿಗೆ ಸಮಾಧಾನ ಮಾಡು ಭರವಸೆಯನ್ನು ತುಂಬಿ ಬಂದಿದ್ದಾರೆ. ನಿನ್ನೆಯಿಂದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ‌ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *