ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಇಂದು ಮಹದೇವ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಆಗಮಿಸಿದ್ದರು. ಇಬ್ಬರು ವೇದಿಕೆಯನ್ನು ಹಂಚಿಕೊಂಡಿದ್ದರು. ಆಗಲೇ ಇಬ್ಬರ ನಡುವೆ ಮೈಕ್ ಗುದ್ದಾಟ ನಡೆದಿದೆ.
ವೇದಿಕೆ ಮೇಲೆ ಮಾತನಾಡುತ್ತಾ, ಈಶ್ವರಾನಂದ ಸ್ವಾಮೀಜಿ ಅವರು, ಸಿಎಂ ಬೊಮ್ಮಾಯಿ ಅವರು ಕೇವಲ ಆಶ್ವಾಸನೆ ಕೊಡುವ ಮುಖ್ಯಮಂತ್ರಿಗಳಾಗಬಾರದು. ಬೆಂಗಳೂರು ಪ್ತವಾಹ ಬಂದು ಏನೆಲ್ಲಾ ಆಗಿದೆ ಎಂಬುದು ತಿಳಿದಿದೆ. ಆದರೆ ಇದು ಅಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆಯಾಗುತ್ತಿಲ್ಲ ಎಂದು ಸ್ವಾಮೀಜಿಗಳು ಮುಖ್ಯಮಂತ್ರಿಗಳ ವಿರುದ್ಧ ಮಾತನಾಡುತ್ತಿದ್ದರು.
ಇದಕ್ಕೆ ಸಿಡಿಮಿಡಿಗೊಂಡ ಸಿಎಂ ಬೊಮ್ಮಾಯಿ ಅವರು, ಸ್ವಾಮೀಜಿಗಳು ಮಾತನಾಡುತ್ತಿರುವಾಗಲೇ ಮೈಕ್ ಕಸಿದುಕೊಂಡಿದ್ದಾರೆ. ಜೊತೆಗೆ ಸ್ವಾಮೀಜಿ ಮಾಡಿದ ಆಪಾದನೆಗೆ ಸ್ಪಷ್ಟನೆ ನೀಡಿದ್ದಾರೆ. ಒತ್ತುವರಿ ತೆರವು ಮಾಡುವ ಮೂಲಕ ಆದಷ್ಡು ಬೇಗ ರಾಜಕಾಲುವೆ ಕೆಲಸವನ್ನು ಮಾಡುತ್ತೇನೆ. ಆ ಕೆಲಸ ಈಗಾಗಲೇ ಆರಂಭವಾಗಿದೆ. ಸರ್ಕಾರದಿಂದ ಕೂಡ ಅದಕ್ಕೆ ಬೇಕಾದ ಅನುದಾನ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್