Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರೀ ಆಶ್ವಾಸನೆ ಕೊಡುವ ಮುಖ್ಯಮಂತ್ರಿ ಆಗಬಾರದು ಎನ್ನುತ್ತಿದ್ದಂತೆ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡ ಸಿಎಂ ಬೊಮ್ಮಾಯಿ..!

Facebook
Twitter
Telegram
WhatsApp

ಬೆಂಗಳೂರು: ಇಂದು ಮಹದೇವ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಆಗಮಿಸಿದ್ದರು. ಇಬ್ಬರು ವೇದಿಕೆಯನ್ನು ಹಂಚಿಕೊಂಡಿದ್ದರು. ಆಗಲೇ ಇಬ್ಬರ ನಡುವೆ ಮೈಕ್ ಗುದ್ದಾಟ ನಡೆದಿದೆ.

ವೇದಿಕೆ ಮೇಲೆ ಮಾತನಾಡುತ್ತಾ, ಈಶ್ವರಾನಂದ ಸ್ವಾಮೀಜಿ ಅವರು, ಸಿಎಂ ಬೊಮ್ಮಾಯಿ ಅವರು ಕೇವಲ ಆಶ್ವಾಸನೆ ಕೊಡುವ ಮುಖ್ಯಮಂತ್ರಿಗಳಾಗಬಾರದು. ಬೆಂಗಳೂರು ಪ್ತವಾಹ ಬಂದು ಏನೆಲ್ಲಾ ಆಗಿದೆ ಎಂಬುದು ತಿಳಿದಿದೆ. ಆದರೆ ಇದು ಅಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆಯಾಗುತ್ತಿಲ್ಲ ಎಂದು ಸ್ವಾಮೀಜಿಗಳು ಮುಖ್ಯಮಂತ್ರಿಗಳ ವಿರುದ್ಧ ಮಾತನಾಡುತ್ತಿದ್ದರು.

ಇದಕ್ಕೆ ಸಿಡಿಮಿಡಿಗೊಂಡ ಸಿಎಂ ಬೊಮ್ಮಾಯಿ ಅವರು, ಸ್ವಾಮೀಜಿಗಳು ಮಾತನಾಡುತ್ತಿರುವಾಗಲೇ ಮೈಕ್ ಕಸಿದುಕೊಂಡಿದ್ದಾರೆ. ಜೊತೆಗೆ ಸ್ವಾಮೀಜಿ ಮಾಡಿದ ಆಪಾದನೆಗೆ ಸ್ಪಷ್ಟನೆ ನೀಡಿದ್ದಾರೆ. ಒತ್ತುವರಿ ತೆರವು ಮಾಡುವ ಮೂಲಕ ಆದಷ್ಡು ಬೇಗ ರಾಜಕಾಲುವೆ ಕೆಲಸವನ್ನು ಮಾಡುತ್ತೇನೆ. ಆ ಕೆಲಸ ಈಗಾಗಲೇ ಆರಂಭವಾಗಿದೆ. ಸರ್ಕಾರದಿಂದ ಕೂಡ ಅದಕ್ಕೆ ಬೇಕಾದ ಅನುದಾನ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!