in

72 ವರ್ಷದಲ್ಲಿ ಆಗದ ಕೆಲಸವನ್ನು 3 ವರ್ಷದಲ್ಲೇ ನಮ್ಮ ಪ್ರಧಾನಿ ಮಾಡಿ ತೋರಿಸಿದ್ದಾರೆ : ಸಿಎಂ ಬೊಮ್ಮಾಯಿ

suddione whatsapp group join

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್ ನ ಹುಮನಬಾದ್ ಗೆ ಭೇಟಿ ನೀಡಿದ್ದಾರೆ. ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ ಅವರು ಮಾತನಾಡಿದ್ದು, ಡಬಲ್ ಇಂಜಿನ್ ಸರ್ಕಾರದಲ್ಲಿ ಆದಂತ ಅಭಿವೃದ್ಧಿಯನ್ನು ಹೊಗಳಿದ್ದಾರೆ.

ಕೋವಿಡ್ ವೇಳೆ ಪ್ರತಿ ಮನೆಗೆ 10 ಕೆಜಿ ಅಕ್ಕಿಯನ್ನು ನೀಡಲಾಗಿದೆ. 72 ವರ್ಷದಲ್ಲಿ ಮಾಡಲಾಗದ ಕೆಲಸಗಳನ್ನು ಪ್ರಧಾನಿಯವರು ಮೂರು ವರ್ಷದಲ್ಲಿಯೇ ಮಾಡಿ ತೋರಿಸಿದ್ದಾರೆ. ಕಲಬುರಗಿಗೆ ಮೆಗಾ ಟೆಕ್ಸ್ಟೈಲ್ ಪಾರ್ಕ್ ಕೊಟ್ಟಿದ್ದಾರೆ. ಡಬಲ್ ಎಂಜಿನ್ ಸರ್ಕಾರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ನಡೆದಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲೂ ಅಭಿವೃದ್ಧಿಯಾಗಿದೆ. ಆದರೆ ಮಲ್ಲಿಕಾರ್ಜುನ್ ಖರ್ಗೆ ಅವರು ಬಾಯಿಗೆ ಬಂದಂತೆ‌ ಮಾತನಾಡುತ್ತಾರೆ.

ಖರ್ಗೆ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಲಿಂಗಾಯತ ಸಿಎಂ ಭ್ರಷ್ಟರು ಎಂದು ಹೇಳುತ್ತಾರೆ. ಕಾಂಗ್ರೆಸ್ ನವರಿಗೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಭ್ರಷ್ಟ ಆಡಳಿತ ನೀಡಿದ್ದರು. ಜನರಿಗೆ ಅಮೃತವನ್ನೇ ಕೊಡುವವರು ಪ್ರಧಾನಿ ಮೋದಿ ಎಂದು ಕೊಂಡಾಡಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಬೀದರ್ ಗೆ ಬಂದಿಳಿದ ಪ್ರಧಾನಿ ಮೋದಿ : ಪ್ರಚಾರದ ವೇಳೆ ಏನಂದ್ರು..?

ಕೂಡ್ಲಿಗಿ ಪ್ರಚಾರದ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ..!