Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಸಂಕಲ್ಪ ಯಾತ್ರೆಯ ನಡುವೆ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಸಿಎಂ ಬೊಮ್ಮಾಯಿ & ಬಿಎಸ್ವೈ

Facebook
Twitter
Telegram
WhatsApp

ವಿಜಯನಗರ: ಇತ್ತಿಚೆಗೆ SC/ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದ ಸಿಎಂ ಬಸವಾರಜ್ ಬೊಮ್ಮಾಯಿ ಅವರು ಇಂದು ದಲಿತರ ಮನೆಗೆ ಹೋಗಿ ಉಪಹಾರ ಸೇವಿಸಿದ್ದಾರೆ. ಕಮಲಾಪುರದ ದಲಿತ ಮುಖಂಡರ ಮನೆಯಲ್ಲಿ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಉಪಹಾರ ಸೇವಿಸಿದ್ದಾರೆ.

ಬಿಜೆಪಿ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಇಂದು ಹೊಸಪೇಟೆಟ ಹಾಗೂ ಕೊಪ್ಪಳದಲ್ಲಿ ನಡೆಯುತ್ತಿದೆ. ಈ ವೇಳೆ ಕಮಲಾಪುರದ ದಲಿತ ಮುಖಂಡ ಕೊಲ್ಲಾರಪ್ಪ ಅವರ ಮನೆಗೆ ಸಿಎಂ ಮತ್ತು ಬಿಎಸ್ವೈ ಭೇಟಿ ನೀಡಿದ್ದಾರೆ. ಈ ವೇಳೆ ಸ್ಥಳೀಯರು ಪಟಾಕಿ ಸಿಡಿಸಿ, ಸ್ವಾಗತ ಕೋರಿದ್ದಾರೆ. ಅಲ್ಲಿಯೇ ಇದ್ದ ಈಶ್ವರ ದೇವಸ್ಥಾನಕ್ಕೂ ಸಿಎಂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಕೊಲ್ಲಾರಪ್ಪ ಮನೆಗೆ ಹೋಗಿ ಉಪ್ಪಿಟ್ಟು, ಒಗ್ಗರಣೆ ಮಿರ್ಚಿ, ಕೇಸರಿ ಬಾತ್ ಸವಿದಿದ್ದಾರೆ.

ಈ ಬಗ್ಗೆ ಯಲ್ಲಮ್ಮ ಮಾತನಾಡಿದ್ದು, ಸಿಎಂ ನಮ್ಮ ಮನೆಗೆ ಬಂದಿದ್ದು ತುಂಬಾ ಖುಷಿ ಕೊಟ್ಟಿದೆ. ನಾವೂ ಬಡವರು ಸಿಎಂ ಬಳಿ ಏನನ್ನು ಕೇಳಿಲ್ಲ. ಅವರಿಗೆ ಎಲ್ಲವೂ ಅರ್ಥವಾಗುತ್ತದೆ. ಅವರೇ ಸಹಾಯ ಮಾಡುತ್ತಾರೆ ಎಂದಿದ್ದಾರೆ.

ಇನ್ನು ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಬಿಜೆಪಿ ಕರ್ನಾಟಕ #JanaSankaplaYatreಯ ಅಂಗವಾಗಿ ಇಂದು ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ದಲಿತ ಕುಟುಂಬ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿ ಉಪಹಾರ ಸೇವಿಸಿ, ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದೆನು. ಈ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಇತರರು ಉಪಸ್ಥಿತರಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!