Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನಕಪುರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ದರ್ಶನ ಪಡೆದ ಸಿಎಂ ಡಿ.ಕೆ ಶಿವಕುಮಾರ್

---Advertisement---

ಬೆಂಗಳೂರು : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಬಸವನಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರೊಂದಿಗೆ ಹಬ್ಬವನ್ನು ಸಡಗರದಿಂದ ಆಚರಿಸಿದರು.

ಕನಕಪುರ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಜನರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದ ಅವರು, ಜನರ ಆತ್ಮೀಯತೆ ಮತ್ತು ಪ್ರೀತಿಗೆ ಸದಾ ಚಿರಋಣಿ ಎಂದು ಭಾವನಾತ್ಮಕವಾಗಿ ನುಡಿದರು.

ಬಳಿಕ ಬೆಂಗಳೂರಿನ ಐತಿಹಾಸಿಕ ಬಸವನಗುಡಿಯ ಶ್ರೀ ದೊಡ್ಡ ಗಣಪತಿ ದೇವಸ್ಥಾನಕ್ಕೆ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ತೆರಳಿ, ವಿಘ್ನವಿನಾಶಕನಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಾಡಿನ ಜನರ ಬದುಕಿನ ಎಲ್ಲಾ ವಿಘ್ನಗಳು ನಿವಾರಣೆಯಾಗಿ, ಪ್ರತಿಯೊಂದು ಕುಟುಂಬದಲ್ಲೂ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ ಮತ್ತು ರಾಜ್ಯವು ಸಮೃದ್ಧಿ ಪಥದಲ್ಲಿ ಮುನ್ನಡೆಯಲಿ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಶುಭ ಹಾರೈಸಿದರು.

Join WhatsApp

Join Now

Join Telegram

Join Now