Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಹಿರಿಯ ನಾಯಕ ಹೆಚ್. ಹನುಮಂತಪ್ಪ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್; ಭಾವಪೂರ್ಣ ನಮನ

---Advertisement---

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ರಾಜ್ಯಸಭಾ ಸದಸ್ಯರು ಹಾಗೂ ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದ ಹೆಚ್. ಹನುಮಂತಪ್ಪ ಅವರ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು.

ಹೆಚ್. ಹನುಮಂತಪ್ಪ ಅವರು ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, “ರಾಜಕೀಯವನ್ನು ಅಧಿಕಾರದ ಸಾಧನವಾಗಿ ಅಲ್ಲದೆ, ಜನಸೇವೆಯ ಮಾರ್ಗವಾಗಿ ಕಂಡಿದ್ದ ಹೆಚ್. ಹನುಮಂತಪ್ಪ ಅವರಂತಹ ಹಿರಿಯ ಮುತ್ಸದ್ದಿಯ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಕಂಬನಿ ಮಿಡಿದರು.

 

ಹೆಚ್. ಹನುಮಂತಪ್ಪ ಅವರು 1982ರಿಂದ 2000ರವರೆಗೆ ಸತತವಾಗಿ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ರೇಷ್ಮೆ ಕ್ಷೇತ್ರದ ಅಭಿವೃದ್ಧಿಗೆ ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿ, ರೈತರ ಹಾಗೂ ರೇಷ್ಮೆ ಬೆಳೆಗಾರರ ಹಿತಾಸಕ್ತಿಗಾಗಿ ಶ್ರಮಿಸಿದ್ದರು ಎಂಬುದನ್ನು ಸಿಎಂ ಸ್ಮರಿಸಿದರು. ಅವರ ಆದರ್ಶಗಳು, ಸಮಾಜಮುಖಿ ಚಿಂತನೆಗಳು ಹಾಗೂ ಜನಪರ ಸೇವೆಗಳು ಸದಾ ಸ್ಮರಣೀಯವಾಗಿರಲಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now