Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರಕ್ಕೆ ಡಿಕೆಶಿ ಭೇಟಿ: ನಮ್ಮ ಮೆಟ್ರೋದಲ್ಲಿ ಪ್ರಯಾಣ

---Advertisement---

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶೇಷ ಹೆಜ್ಜೆಯೊಂದನ್ನು ಇಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಿಐಪಿ ಸಂಚಾರದಿಂದ ನಾಗರಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಅವರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ.

ಇಂದು ಬೆಂಗಳೂರು ದಕ್ಷಿಣ ಜಿಲ್ಲೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕನಕಪುರ ಹಾಗೂ ಹಾರೋಹಳ್ಳಿ ಭಾಗಗಳಲ್ಲಿ ಆಯೋಜಿಸಿರುವ ಬೃಹತ್ ‘ಕೃತಜ್ಞತಾ ಸಮರ್ಪಣಾ’ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಆಗಮಿಸುತ್ತಿರುವುದರಿಂದ ಈ ಭೇಟಿ ರಾಜಕೀಯ ವಲಯದಲ್ಲೂ ಭಾರಿ ಮಹತ್ವ ಪಡೆದುಕೊಂಡಿದೆ.

ಸಾಮಾನ್ಯವಾಗಿ ಮುಖ್ಯಮಂತ್ರಿಗಳ ಸಂಚಾರದ ವೇಳೆ ‘ಜೀರೋ ಟ್ರಾಫಿಕ್’ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ದಟ್ಟಣೆಯ ಸಮಸ್ಯೆ ಎದುರಾಗುತ್ತದೆ. ಇದನ್ನು ಮನಗಂಡ ಸಿಎಂ ಶಿವಕುಮಾರ್ ಅವರು ಜೀರೋ ಟ್ರಾಫಿಕ್ ಬೇಡವೆಂದು ಸರಳತೆಯನ್ನು ಮೆರೆದಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಿಂದ ಹೊರಟ ಸಿಎಂ, ಮೊದಲು ವಿಧಾನಸೌಧ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ ಕನಕಪುರ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಸಾಮಾನ್ಯರಂತೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now