ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 15ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಬರುತ್ತಿಲ್ಲ ಎಂಬ ಬೇಸರವಿದೆ. ಜೊತೆಗೆ ಮನವಿಯನ್ನು ಮಾಡಿದರು ಹಣ ರಿಲೀಸ್ ಆಗಿಲ್ಲ ಎಂಬ ಬೇಸರವೂ ಇದೆ. ಇದೀಗ ಬಜೆಟ್ ಮಂಡನೆಯ ವೇಳೆಯೂ ಈ ವಿಚಾರವನ್ನು ತೆಗೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಬಜೆಟ್ ವೇಳೆ ಪುನರುಚ್ಛಾರ ಮಾಡಿದ್ದಾರೆ. ಇದನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಸುಳ್ಳು ಹೇಳಬೇಡಿ ಸಿದ್ದರಾಮಯ್ಯ ಅವರೇ ಎಂದು ಬಜೆಟ್ ನಡವೆಯೇ ವಿಪಕ್ಷ ನಾಯಕರು ಗದ್ದಲ ಎಬ್ಬಿಸಿ, ಪ್ರತಿಭಟನೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಅದನ್ನು ಅಲ್ಲಿಗೆ ಮುಗಿಸಿ ಬಜೆಟ್ ಮುಂದುವರೆಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಾಯಕರು ದೆಹಲಿಯನ್ನು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಕೋಟಿ ಹಣ ಬರಬೇಕಿದೆ ಎಂಬುದರ ವಿಚಾರವನ್ನು ದಾಖಲೆ ಸಮೇತ ಮಾತನಾಡಿದ್ದರು.
ಬೆಂಗಳೂರು; ಇನ್ನೊಂದು ವಾರವಷ್ಟೇ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಆರಂಭವಾಗುತ್ತವೆ. ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ.…
ಇಂದು ಭಾರತ ವರ್ಸಸ್ ಪಾಕ್ ಪಂದ್ಯ ನಡೆಯಲಿದೆ. ಸಾಂಪ್ರಾದಾಯಿಕ ವೈರಿಗಳನ್ನು ಕಟ್ಟಿ ಹಾಕಲು ಭಾರತ ತಂಡ ಸಜ್ಜಾಗಿದೆ. ಈ ಪಂದ್ಯವನ್ನ…
ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…
ಸುದ್ದಿಒನ್ ಬ್ಲಾಕ್ ಕಾಫಿ ಹೃದಯದ ಆರೋಗ್ಯವನ್ನು ರಕ್ಷಿಸುವುದಲ್ಲದೆ, ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.…
ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ, ಈ ರಾಶಿಗಳ ಮದುವೆಗೆ ತುಂಬಾ ಅಡಚಣೆ, ಭಾನುವಾರ ರಾಶಿ ಭವಿಷ್ಯ 23 ಫೆಬ್ರವರಿ…