Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿಎಂ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ : ಹರಿಪ್ರಸಾದ್ ಮಾತಿಗೆ ಪರಮೇಶ್ವರ್ ಪ್ರತಿಕ್ರಿಯೆ

ಸಚಿವ ಪರಮೇಶ್ವರ್
---Advertisement---

 

 

ತುಮಕೂರು: ದಲಿತ ಸಿಎಂ ಆಗಬೇಕೆಂಬ ಕೂಗು ರಾಜ್ಯದಲ್ಲಿ ಆಗಾಗ ಕೇಳಿಸುತ್ತಲೇ ಇರುತ್ತದೆ. ಅದರಲ್ಲೂ ಜಿ ಪರಮೇಶ್ವರ್ ಅಂಗಳದಲ್ಲಿ ಸಿಎಂ ವಿಚಾರ ಸ್ಪ್ರಿಂಗ್ ಆಗುತ್ತಲೇ ಇರುತ್ತದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿರುವ ಬಿಕೆ ಹರಿಪ್ರಸಾದ್ ಆಗಾಗ ಸಿದ್ದರಾಮಯ್ಯ ಅವರ ಮೇಲೂ ಆಕ್ರೋಶ ಹೊರ ಹಾಕುತ್ತಿರುತ್ತಾರೆ. ಇತ್ತಿಚೆಗೆ ಗೃಹ ಸಚಿವ ಪರಮೇಶ್ವರ್ ಅವರ ಪರ ಬ್ಯಾಟ್ ಬೀಸಿದ್ದರು.

ಗೃಹ ಸಚಿವ ಪರಮೇಶ್ವರ್ ಗೆ ಸಿಎಂ ಆಗಲು ಅರ್ಹತೆ ಇರುವಂತ ವ್ಯಕ್ತಿ. ಪರಮೇಶ್ವರ್ ಗೆ ಈ ಬಾರಿ ಡಿಸಿಎಂ ಸ್ಥಾನವನ್ನಾದರೂ ನೀಡಬೇಕಿತ್ತು. ಇದು ನಾವೂ ತಲೆ ತಗ್ಗಿಸುವಂತ ವಿಚಾರ ಎಂದಿದ್ದರು. ಇದಕ್ಕೆ‌ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿ, ಬಿಕೆ ಹರಿಪ್ರಸಾದ್ ಅವರು ಅಭಿಮಾನದಿಂದ ಈ ಮಾತನ್ನು ಹೇಳಿದ್ದಾರೆ.

ನಾನು ಸಿಎಂ ಆಗಬೇಕು ಎಂದು ಹೇಳಿದ ಬಿಕೆ ಹರಿಪ್ರಸಾದ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಮಂದಿಗೆ ನಾನು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾರು ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಹೈಕಮಾಂಡ್ ತೀರ್ಮಾನದ ಮೇರೆಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರನ್ನು ಡಿಸಿಎಂ ಮಾಡಲಾಗಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment