ಮೈಸೂರು ಪೇಟ ತೊಡಿಸಿ ಪ್ರಧಾನಿ‌ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

1 Min Read

 

ಇಂದು ಸಿಎಂ ಸಿದ್ದರಾಮಯ್ಯ ಅವರ 76ನೇ ವರ್ಷದ ಹುಟ್ಟುಹಬ್ಬ. ಅಭಿಮಾನಿಗಳೆಲ್ಲಾ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಜ್ಯದಲ್ಲಿ ಎಲ್ಲೆಡೆ ಅವರ ಹುಟ್ಟುಹಬ್ಬದ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಇದರ ಜೊತೆಗೆ ಇಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ‌ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಸಂಸತ್ ಭವನದಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ರಾಜ್ಯದ ಅಭಿವೃದ್ಧಿ, ಅನುದಾನದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಮೈಸೂರು ಪೇಟ‌ ಧರಿಸಿ, ಪ್ರಧಾನಿ ಅವರಿಗೆ ಸ್ಪೆಷಲ್ ಉಡುಗೊರೆಯನ್ನು ನೀಡಿದ್ದಾರೆ. ಇಂದು ಸಿದ್ದರಾಮಯ್ಯ ಅವರ ಹುಟ್ಟುಹಬ್ಬವಾದ ಹಿನ್ನೆಲೆ, ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಅವರಿಗೆ ಶುಭಕೋರಿದ್ದಾರೆ.

ಅನ್ನಭಾಗ್ಯಕ್ಕೆ ಅಕ್ಕಿ, ರಾಜ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ನೀರಾವರು ಯೋಜನೆಗಳಿಗೆ ಅನುದಾನ, ನರೇಗಾ ಯೋಜನೆಗೆ ಹೆಚ್ಚಿನ ಹಣಕಾಸು ನೀಡುವಂತೆ ಕೋರಿದ್ದಾರೆ. ಬಳಿಕ ರಾಜನಾಥ್ ಸಿಂಗ್, ನಿರ್ಮಲ ಸೀತರಾಮನ್, ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅಭಿವೃದ್ಧಿಗಳ ವಿಚಾರವಾಗಿ ಚರ್ಚೆ ಮಾಡಲಾಗುತ್ತದೆ.

 

Share This Article
Leave a Comment

Leave a Reply

Your email address will not be published. Required fields are marked *