ಬೆಂಗಳೂರು.ಆಗಸ್ಟ್ 4: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ, ಸಚಿವ ಸಂಪುಟದ ಸಹೋದ್ಯೋಗಿಗಳು ತಮಗೆ ಹಂಚಿಕೆ ಮಾಡಲಾಗಿರುವ ಜಿಲ್ಲೆಗಳಿಗೆ ತಕ್ಷಣವೇ ಪ್ರವಾಸ ಕೈಗೊಂಡು, ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.
ಪ್ರತಿಯೊಂದು ತಾಲೂಕಿನಲ್ಲಿನ ನೈಜ ಪರಿಸ್ಥಿತಿಯನ್ನು ಪರಿಶೀಲಿಸಿ, ವಾಸ್ತವ ಸ್ಥಿತಿಯ ವರದಿಯನ್ನು ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಜಿಲ್ಲಾವಾರು ಸಚಿವರ ನಿಯೋಜನೆ ಪಟ್ಟಿ:
ಡಾ. ಜಿ. ಪರಮೇಶ್ವರ – ತುಮಕೂರು
ರಘುಮೂರ್ತಿ – ಚಿತ್ರದುರ್ಗ
ಬಿ.ಎಸ್. ಸುರೇಶ್ (ಬೈರತಿ) – ಚಿಕ್ಕಬಳ್ಳಾಪುರ
ಕೆ.ಎಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾರೆಡ್ಡಿ – ಕೋಲಾರ
ಹೆಚ್. ಸಿ. ಬಾಲಕೃಷ್ಣ – ಬೆಂಗಳೂರು ದಕ್ಷಿಣ

ಬಿ.ಝೆಡ್. ಜಮೀರ್ ಅಹಮದ್ ಖಾನ್ – ವಿಜಯನಗರ
ಕೆ.ಜೆ. ಜಾರ್ಜ್ – ಚಿಕ್ಕಮಗಳೂರು
ಕೆ.ಎಂ. ಶಿವಲಿಂಗೇಗೌಡ – ಹಾಸನ
ಮಧು ಬಂಗಾರಪ್ಪ – ಶಿವಮೊಗ್ಗ
ಎಂಬಿ. ಪಾಟೀಲ್ – ವಿಜಯಪುರ
ವಿಜಯಾನಂದ ಕಾಶಪ್ಪನವರ – ಬಾಗಲಕೋಟೆ
ಬಸವರಾಜ ರಾಯರೆಡ್ಡಿ – ಗದಗ
ಎಸ್. ಎಸ್. ಮಲ್ಲಿಕಾರ್ಜುನ – ದಾವಣಗೆರೆ
ರುದ್ರಪ್ಪ ಲಮಾಣಿ – ಹಾವೇರಿ

ಸತೀಶ್ ಜಾರಕಿಹೊಳಿ – ಬೆಳಗಾವಿ
ಸಂತೋಷ್ ಲಾಡ್ – ಧಾರವಾಡ
ಲಕ್ಷ್ಮಣ ಸವದಿ – ಉತ್ತರಕನ್ನಡ
ಪ್ರಿಯಾಂಕ್ ಖರ್ಗೆ – ಕಲಬುರಗಿ
ಅಜಯ್ ಧರಂ ಸಿಂಗ್ – ರಾಯಚೂರು
ಈಶ್ವರ್ ಖಂಡ್ರೆ – ಬೀದರ್

ಯು.ಟಿ. ಖಾದರ್ – ದಕ್ಷಿಣ ಕನ್ನಡ & ಉಡುಪಿ
ಪಿ.ಎಂ.ನರೇಂದ್ರಸ್ವಾಮಿ – ಕೊಡಗು
ಯತೀಂದ್ರ ಸಿದ್ದರಾಮಯ್ಯ – ಮೈಸೂರು
ಚೆಲುವರಾಯಸ್ವಾಮಿ – ಮಂಡ್ಯ
ಪುಟ್ಟರಂಗಶೆಟ್ಟಿ – ಚಾಮರಾಜನಗರ
ಬಿ. ನಾಗೇಂದ್ರ – ಬಳ್ಳಾರಿ
ಶರಣ ಪ್ರಕಾಶ್ ಪಾಟೀಲ – ಯಾದಗಿರಿ
ಶಿವರಾಜ್ ತಂಗಡಗಿ – ಕೊಪ್ಪಳ
ಕೃಷ್ಣ ಬೈರೇಗೌಡ – ಬೆಂಗಳೂರು ನಗರ
ಸಚಿವರು ತಕ್ಷಣವೇ ಆಯಾ ಜಿಲ್ಲೆಗಳಿಗೆ ತೆರಳಿ, ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿಕೊಳ್ಳುವಂತೆ ಸ್ಪಷ್ಟಪಡಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















