ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ಒಳಮೀಸಲಾತಿ ವಿಚಾರಕ್ಕೆ ಚರ್ಚೆ ನಡೆದಿದೆ. ಇದೀಗ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ನೀಡುವ ಒಳ ಮೀಸಲಾಗಿ ವಿಚಾರ ಬಹುತೇಕ ಫೈನಲ್ ಆಗಿದೆ. ಇಂದು ಅಧಿಕೃತವಾಗಿ ಘೋಷಣೆ ಮಾಡುವುದೊಂದೆ ಬಾಕಿ ಇದೆ.
ಬಹಳಷ್ಟು ವರ್ಷಗಳ ಹೋರಾಟದ ಫಲವಾಗಿ ಸಿದ್ದರಾಮಯ್ಯ ಅವರು ಒಪ್ಪಿಗೆ ಕೊಟ್ಟ ಬೆನ್ನಲ್ಲೇ ದಲಿತ ಸಮುದಾಯದವರು ಸಿಕ್ಕಾಪಟ್ಟೆ ಸಂತಸಗೊಂಡಿದ್ದು, ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕಿ, ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಐದು ವರ್ಗೀಕರಣ ಮಾಡಲಾಗಿತ್ತು. ಸರ್ಕಾರ ಇದನ್ನು ಮೂರು ಗುಂಪುಗಳಾಗಿ ವರ್ಗೀಕರಣ ಮಾಡಿತ್ತು.
ಎಡಗೈ ಸಮುದಾಯದಲ್ಲಿ 18 ಜಾತಿಗಳಿದ್ದು, ಶೇ.6ರಷ್ಟು ಮೀಸಲಾತಿ, ಬಲಗೈ ಸಮುದಾಯದಲ್ಲಿ 20 ಜಾತಿಗಳಿದ್ದು ಶೇಕಡ 6ರಷ್ಟು ಮೀಸಲಾತಿ ಲಭಿಸಿದೆ. ಇತರ ಸಮುದಾಯದ 63 ಜಾತಿಗಳಿಗೆ ಶೇಕಡ 5ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಅಂತಿಮವಾಗಿದೆ. ಸದ್ಯಕ್ಕೆ ಘೋಷಣೆಯೊಂದೆ ಬಾಕಿ ಇದೆ. ಈ ದಿನಕ್ಕಾಗಿ ದಲಿತ ಸಮುದಾಯದವರು ಕಾಯುತ್ತ ಇದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ಕೊಟ್ಟ ಬೆನ್ನಲ್ಲೇ ಫುಲ್ ಖುಷಿಯಾಗಿದ್ದಾರೆ.
ಅಧಿಕೃತವಾಗಿ ಘೋಷಣೆ ಮಾಡುವುದಕ್ಕೂ ಮುನ್ನವೇ ಸಿದ್ದರಾಮಯ್ಯ ಅವರಿಗೆ ಸಿಹಿ ಹಂಚಿ, ದಲಿತ ಸಮುದಾಯದವರು ಖುಷಿ ಪಟ್ಟಿದ್ದಾರೆ. ಒಳಮೀಸಲಾತಿ ಜಾರಿಯಾಗುವ ಎಲ್ಲಾ ನಿರೀಕ್ಷೆ ಮೂಡಿದೆ. ಹೀಗಾಗಿ ಅಷ್ಟು ವರ್ಷಗಳು ಕಾಯ್ತಿದ್ದ ದಿನ ಹತ್ತಿರ ಬಂದಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್