Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ : ಸಂತಸಗೊಂಡ ಸಮುದಾಯದ ಮಂದಿ

---Advertisement---

ಬೆಂಗಳೂರು: ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ಒಳಮೀಸಲಾತಿ ವಿಚಾರಕ್ಕೆ ಚರ್ಚೆ ನಡೆದಿದೆ. ಇದೀಗ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ನೀಡುವ ಒಳ ಮೀಸಲಾಗಿ ವಿಚಾರ ಬಹುತೇಕ ಫೈನಲ್ ಆಗಿದೆ. ಇಂದು ಅಧಿಕೃತವಾಗಿ ಘೋಷಣೆ ಮಾಡುವುದೊಂದೆ ಬಾಕಿ ಇದೆ.

ಬಹಳಷ್ಟು ವರ್ಷಗಳ ಹೋರಾಟದ ಫಲವಾಗಿ ಸಿದ್ದರಾಮಯ್ಯ ಅವರು ಒಪ್ಪಿಗೆ ಕೊಟ್ಟ ಬೆನ್ನಲ್ಲೇ ದಲಿತ ಸಮುದಾಯದವರು ಸಿಕ್ಕಾಪಟ್ಟೆ ಸಂತಸಗೊಂಡಿದ್ದು, ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕಿ, ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಐದು ವರ್ಗೀಕರಣ ಮಾಡಲಾಗಿತ್ತು. ಸರ್ಕಾರ ಇದನ್ನು ಮೂರು ಗುಂಪುಗಳಾಗಿ ವರ್ಗೀಕರಣ ಮಾಡಿತ್ತು.

ಎಡಗೈ ಸಮುದಾಯದಲ್ಲಿ 18 ಜಾತಿಗಳಿದ್ದು, ಶೇ.6ರಷ್ಟು ಮೀಸಲಾತಿ, ಬಲಗೈ ಸಮುದಾಯದಲ್ಲಿ 20 ಜಾತಿಗಳಿದ್ದು ಶೇಕಡ 6ರಷ್ಟು ಮೀಸಲಾತಿ ಲಭಿಸಿದೆ. ಇತರ ಸಮುದಾಯದ 63 ಜಾತಿಗಳಿಗೆ ಶೇಕಡ 5ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಅಂತಿಮವಾಗಿದೆ. ಸದ್ಯಕ್ಕೆ ಘೋಷಣೆಯೊಂದೆ ಬಾಕಿ ಇದೆ. ಈ ದಿನಕ್ಕಾಗಿ ದಲಿತ ಸಮುದಾಯದವರು ಕಾಯುತ್ತ ಇದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ಕೊಟ್ಟ ಬೆನ್ನಲ್ಲೇ ಫುಲ್ ಖುಷಿಯಾಗಿದ್ದಾರೆ.

ಅಧಿಕೃತವಾಗಿ ಘೋಷಣೆ ಮಾಡುವುದಕ್ಕೂ ಮುನ್ನವೇ ಸಿದ್ದರಾಮಯ್ಯ ಅವರಿಗೆ ಸಿಹಿ ಹಂಚಿ, ದಲಿತ ಸಮುದಾಯದವರು ಖುಷಿ ಪಟ್ಟಿದ್ದಾರೆ. ಒಳಮೀಸಲಾತಿ ಜಾರಿಯಾಗುವ ಎಲ್ಲಾ ನಿರೀಕ್ಷೆ ಮೂಡಿದೆ. ಹೀಗಾಗಿ ಅಷ್ಟು ವರ್ಷಗಳು ಕಾಯ್ತಿದ್ದ ದಿನ ಹತ್ತಿರ ಬಂದಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment