Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಕೀಯ ನಿವೃತ್ತಿ ವಿಚಾರಕ್ಕೆ ಪಿಎಂ ಮೋದಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ..!

---Advertisement---

ಬೆಂಗಳೂರು: ಪ್ರಧಾನಿ ಮೋದಿಯವರು ಇತ್ತಿಚೆಗೆ ಕಾಂಗ್ರೆಸ್ ಮೇಲೆ ಆರೋಪವೊಂದನ್ನು ಮಾಡಿದ್ದರು. ಅಬಕಾರಿ ಇಲಾಖೆಯಿಂದ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ಮಾಡುತ್ತಿದೆ ಎಂದು. ಈ ವಿಚಾರಕ್ಕೆ‌ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಗರಂ ಆಗಿದ್ದು, ಪ್ರಧಾನಿ ಮೋದಿಯವರಿಗೆ ನಿವೃತ್ತಿಯ ಸವಾಲೆಸೆದಿದ್ದಾರೆ.

ಸುಳ್ಳುಗಾರ ಪ್ರಧಾನಿ ಮೋದಿಯವರು ನಮ್ಮ ಮೇಲೆ ಹಸಿ ಹಸಿ ಸುಳ್ಳು ಆರೋಪ ಮಾಡಿದ್ದಾರೆ. ಮೋದಿ ಅವರು ಹೇಳಿದ್ದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಇಲ್ಲದೆ ಇದ್ದರೆ ನೀವೂ ನಿವೃತ್ತಿ ಘೋಷಿಸ್ತೀರಾ ಎಂದು ಸವಾಲು ಹಾಕಿದ್ದಾರೆ. ಮೋದಿಯವರು ಕುಟುಂಬ ರಾಜಕಾರಣದ ಬಗ್ಗೆ ಭಯಾನಕ ಭಾಷಣ ಮಾಡುತ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ ಅವರ ಮೊಮ್ಮಗ, ಬಸವರಾಜ್ ಬೊಮ್ಮಾಯಿ ಅವರ ಮಗನಿಗೆ ಟಿಕೆಟ್ ನೀಡಿಲ್ವಾ..? ಇದು ಕುಟುಂಬ ರಾಝಾರಣ ಅಲ್ವಾ..? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಕುಮಾರಸ್ವಾಮಿ ಕುಟುಂಬದಲ್ಲಿ, ದೇವೇಗೌಡರ ಮಕ್ಕಳು,‌ಮೊಮ್ಮಕ್ಕಳು, ಸೊಸೆಯಂದಿರಿಗೆ ಟಿಕೆಟ್ ನೀಡಿಲ್ವಾ..? ಇವರೆಲ್ಲ ಏನು ಮೋದಿಯವರೆ..? ಇವರೆಲ್ಲ ಕುಟುಂಬ ರಾಜಕಾರಣ ಮಾಡ್ತಿಲ್ವಾ..? ಭಾಷಣ ಮಾಡುವುದು ಸುಲಭ ಮೋದಿಯವರೇ. ಆದರೆ ನುಡಿದಂತೆ ನಡೆದುಕೊಳ್ಳುವುದು ನಿಮ್ಮಿಂದ ಆಗಲ್ಲ.

ಕೊರೋನಾ ಬಂದಾಗ ಇಡೀ ರಾಜ್ಯದ ಪರಿಸ್ಥಿತಿ ಹೇಗಿತ್ತು ಅನ್ನೋದು ನಿಮಗೂ ಗೊತ್ತು ನಮಗೂ ಗೊತ್ತು. ಇಂಥ ಸಂದರ್ಭದಲ್ಲಿ ಯಡಿಯೂರಪ್ಪ, ಶ್ರೀರಾಮುಲು, ಸುಧಾಕರ್ ಅವರು ಚೀನಾದ ಜೊತೆಗೆ ವ್ಯವಹಾರ ಮಾಡು, ಪಿಪಿಇ ಕಿಟ್ ನಲ್ಲಿ ಕಮಿಷನ್ ತಿಂದಿದ್ದು, ಲೂಟಿ ಒಡೆದಿರೋದು ವರದಿಯಾಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊಡದೆ 39 ಜನರ ಸಾವಿಗೆ ಕಾರಣರಾದ ಇವರಿಗೆಲ್ಲ ಕ್ಷಮೆ ಇದ್ಯಾ..? ಎಂದು ಪ್ರಶ್ನೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment