Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಜೀವ ಬೆದರಿಕೆ ; ಕೊಲೆ ಮಾಡಿ ಫ್ರಿಡ್ಜ್ ನಲ್ಲಿ ತುಂಬ್ತೇನೆ ಎಂದವ ಯಾರು..?

---Advertisement---

ಬೆಂಗಳೂರು; ಆ ಕಡೆ ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ನಡೆದಿದೆ. ಇತ್ತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಜೀವ ಬೆದರಿಕೆ ಬಂದಿದೆ. ಅದರಲ್ಲೂ ಕೊಲೆ ಮಾಡಿ ಫ್ರಿಡ್ಜ್ ನಲ್ಲಿ ತುಂಬ್ತೇನೆ ಎಂದು ಹೆದರಿಸಿದ್ದಾರೆ. ಸಿಂದಾರ್ ರಜಪೂತ್ ಎಂಬ ಹೆಸರಿನಿಂದ ಬೆದರಿಕೆಯ ಮೇಲ್ ಬಂದಿದೆ. ಇಬ್ಬರನ್ನು ಕೊಲೆ ಮಾಡಿ ಫ್ರಿಡ್ಜ್ ಹಾಗೂ ಟ್ರ್ಯಾಲಿ ಬ್ಯಾಗ್ ನಲ್ಲಿ ತುಂಬುತ್ತೇನೆ ಎಂದು ಮೇಲ್ ನಲ್ಲಿ ಬೆದರಿಕೆ ಹಾಕಿದ್ದಾರೆ.

ರಾಮಪುರ ಪ್ರಭಾಕರ್ ಗೆ ಒಂದು ಕೋಟಿ ರೂಪಾಯಿ ಸಾಲ ನೀಡಿದ್ದೇನೆ. ಆತ ಇದುವರೆಗೂ ಸಾಲವನ್ನು ವಾಪಸ್ ನೀಡಿಲ್ಲ. ಆತನಿಗೆ ಸಾಲ ವಾಪಸ್ ಕೊಡುವುದಕ್ಕೆ ಹೇಳಿ. ಆ ಒ್ರಭಾಕರ್ ತನ್ನ ಹಣವನ್ನ ತಮ್ಮ ನಾದಿನಿ ಹಾಗೂ ಸಂಬಂಧಿಕರ ಮನೆಯಲ್ಲಿ ಇಟ್ಟಿದ್ದಾನೆ. ಪ್ರಭಾಕರ್ ಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬನಿಗೆ ಈಚೆಗೆ ಮದುವೆ ಮಾಡಿದ್ದಾರೆ. ಸಾಲದ ಹಣವನ್ನು ವಾಪಾಸ್ ನೀಡಲು ಆತನಿಗೆ ಹಣದ ಮೂಲ ಇಲ್ಲ. ಹೀಗಾಗಿ ಪ್ರಭಾಕರ್ ನ ಕೊಲೆ ಮಾಡುತ್ತೇನೆ.

ನೀವೂ ಕೊಡಿಸಲಿಲ್ಲ ಎಂದರೆ ನಿಮ್ಮನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಈ ಮೇಲ್ ಅನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ದೂರನ್ನು ದಾಖಲಿಸಿಕೊಂಡು ಇದೀಗ ಆ ಸಿಂದಾರ್ ರಜಪೂತ ಯಾರು..? ಎಂಬು ಹುಡುಕಾಟದಲ್ಲಿದ್ದಾರೆ. ಸಿಎಂ ಹಾಗೂ ಡಿಸಿಎಂಗೆನೆ ಕೊಲೆ ಮಾಡಿ ಫ್ರಿಡ್ಜ್ ನಲ್ಲಿ ತುಂಬುವ ಬೆದರಿಕೆ ಹಾಕಿದ್ದಾನೆ. ಪೊಲೀಸರು ಮೇಲ್ ಐಡಿ ಆಧರಿಸಿ ಹುಡುಕಾಡುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment