Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯ ಪತ್ರಕರ್ತ ಶಶಿಧರ್ ಭಟ್ ಅವರಿಗೆ ಚಿಕಿತ್ಸೆಗೆ ನೆರವಾದ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಹಿರಿಯ ಪತ್ರಕರ್ತರು, ಸುದ್ದಿ ಟಿವಿ ಸಂಸ್ಥಾಪಕರಾಗಿದ್ದ ಶಶಿಧರ್ ಭಟ್ ಅವರಿಗೆ ಅನಾರೋಗ್ಯ ಕಾಡುತ್ತಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದ್ದಾರೆ.

‘ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದಾರೆ.

ಶಶಿಧರ್ ಭಟ್ ಅವರ ಈ ಪರಿಸ್ಥಿತಿ ಮಾಧ್ಯಮದವರು, ಹಿತೈಷಿಗಳು ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಶಶಿಧರ್ ಭಟ್ ಅವರ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆಬಕೆಲ ಪತ್ರಕರ್ತರು ಸಹಾಯಕ್ಕೆ ಧಾವಿಸಿದ್ದಾರೆ. ಹಣಕಾಸಿನ ನೆರವು ಒದಗಿಸಲು ದಾರಿ ಹುಡುಕುತ್ತಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಸಹಾಯಕ್ಕೆ ಬಂದಿರುವುದು, ಶಶಿಧರ್ ಭಟ್ ಅವರ ಕುಟುಂಬಕ್ಕೂ ಸ್ವಲ್ಪ ನೆಮ್ಮದಿ ತಂದಿದೆ.

ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಶಶಿಧರ್ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರೈ ಅವರು ಕೂಡ ಆಸ್ಪತ್ರೆಗೆ ಧಾವಿಸಿ, ಶಶಿಧರ್ ಭಟ್ ಅವರ ಆರೋಗ್ಯ ವಿಚಾರಿಸಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೀವಿ ಎಂಬ ಧೈರ್ಯ ತುಂಬಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!