Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಕಿತಾ ಸಾಧನೆ ಕೊಂಡಾಡಿದ ಸಿಎಂ ಸಿದ್ದರಾಮಯ್ಯ: ಮೆಳ್ಳಿಗೇರಿ ಶಾಲೆಗೆ 50 ಲಕ್ಷ ಅನುದಾನ

---Advertisement---

ಬಾಗಲಕೋಟೆ: ಇತ್ತಿಚೆಗಷ್ಟೇ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಆ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಏಕೈಕ ವಿದ್ಯಾರ್ಥಿನಿ ಫಸ್ಟ್ ರ್ಯಾಂಕ್ ಬಂದಿರುವುದು. ಬಾಗಲಕೋಟೆಯ ಅಂಕಿತ. ಬಡತನದಲ್ಲಿಯೇ ಬೆಳೆದರು ಇಡೀ ರಾಜ್ಯಕ್ಕೆ ಫಸ್ಟ್ ರ್ಯಾಂಕ್ ಬಂದಿದ್ದಾರೆ. ಅಂಕಿತಾಗೆ ಈಗಾಗಲೇ ಹಲವರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ವಿಶ್ ಮಾಡಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ಅಂಕಿತಾಗೆ ವಿಶ್ ಮಾಡಿ, ಅವರು ಓದಿ ಶಾಲೆಗೆ ದೇಣಿಗೆ ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದ ಅಂಕಿತಾ ಹಾಗೂ ಎರಡನೇ ಸ್ಥಾನ ಪಡೆದ ನವನೀತ್ ಇಬ್ಬರನ್ನು ಸನ್ಮಾನಿಸಲಾಯಿತು. ಅವರ ಪೋಷಕರನ್ನು ಸಿಎಂ ಸಿದ್ದರಾಮಯ್ಯ ಕೊಂಡಾಡಿದರು. ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ ಐದು ಲಕ್ಷ, ನವನೀತ್ ಗೆ ಮೂರು ಲಕ್ಷ ಹಣವನ್ನು ಸಹ ನೀಡಲಾಗಿದೆ.

 

ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು. ಇನ್ನು ಅಂಕಿತಾ ಓದಿದ ಮೊರಾರ್ಜಿ ಶಾಲೆಗೆ ಸಿಎಂ ಸಿದ್ದರಾಮಯ್ಯ ಐವತ್ತು ಲಕ್ಷ ರೂಪಾಯಿ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

 

ಮೊರಾರ್ಜಿ ಶಾಲೆಯಲ್ಲಿ ಓದಿದ ಅಂಕಿತಾ ಮುಂದೆ ಯಾವ ಖಾಸಗಿ ಶಾಲೆಯಲ್ಲಿ ಓದಿದ ಮಕ್ಕಳು ನಿಲ್ಲುವುದಕ್ಕೆ ಆಗಲಿಲ್ಲ. ಈ ಮೂಲಕ ಶ್ರದ್ಧೆ, ಭಕ್ತಿ, ಓದುವ ಛಲವಿದ್ದರೆ ಮುಂದೆ ಬರಬಹುದು ಎಂಬುದನ್ನು ಅಂಕಿತಾ ತೋರಿಸಿಕೊಟ್ಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...