Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ : ಅಧಿದೇವತೆ ಹೊತ್ತು ಹೊರಟ ಅಭಿಮನ್ಯು

---Advertisement---

 

 

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಅದ್ದೂರಿಯಾಗಿ ಸಾಗಿದೆ. ಇಂದು ದಸರಾಗೆ ವಿದ್ಯುಕ್ತ ತೆರೆ ಬೀಳಲಿದೆ. ಇಡೀ ರಾಜ್ಯವೇ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಂತ ಜಂಬೂ ಸವಾರಿ ಹೊರಟಿದೆ. 414ನೇ ಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಅಭಿಮನ್ಯು ತಾಯಿಯನ್ನು ಹೊತ್ತು, ರಾಜಬೀದಿಯಲ್ಲಿ ಸಾಗುತ್ತಿದ್ದಾನೆ.

750 ಕೆಜಿ ಅಂಬಾರಿ ಹೊತ್ತ ಅಭಿಮನ್ಯು, ರಾಜಬೀದಿಯಲ್ಲಿ ಗಜಗಾಂಭೀರ್ಯದಿಂದ ಸಾಗಿದ್ದಾನೆ. ಈ ಮೂಲಕ 5 ಕಿ.ಮೀಟರ್ ನಡೆದು, ಬನ್ನಿಮಂಟಪ ತಲುಪಲಿದ್ದಾನೆ. ಅಲ್ಲಿ ಅಂಬಾರಿಗೆ ವಿಶೇಷ ಪೂಜೆ ನೆರವೇರಲಿದೆ. ಅಭಿಮನ್ಯು ಜೊತೆಗೆ ಲಕ್ಷ್ಮೀ, ವಿಜಯಾ, ಕುಮ್ಕಿ, ಹಿರಣ್ಯ, ವರಲಕ್ಷ್ಮೀ, ಮಹೇಂದ್ರ, ಭೀಮ ಸೇರಿದಂತೆ ಒಟ್ಟು ಹದಿನಾಲ್ಕು ಆನೆಗಳು ಹೆಜ್ಜೆ ಹಾಕುತ್ತಿವೆ. ಚಿನ್ನದ ಅಂಬಾರಿಯಲ್ಲಿ ಚಾಮುಂಡಿ ತಾಯಿಯನ್ನು ಹಲವು ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿದೆ.

ತಾಯಿಯನ್ನು ಹೊತ್ತು ಸಾಗುತ್ತಿರುವ ಅಭಿಮನ್ಯುಗೂ, ಅದಕ್ಕೆ ಸಾಥ್ ನೀಡುತ್ತಿರುವ ಆನೆಗಳಿಗೂ ಹೂವಿನ ಅಲಂಕಾರ ಮಾಡಲಾಗಿದೆ. ಲಕ್ಷಾಂತರ ಜನ ಈ ಸುಂದರ ಕ್ಷಣವನ್ನು ಕಣ್ತುಂಬಿಕೊಳ್ಳಲು ಅರಮನೆ ನಗರಿಯಲ್ಲಿ ನೆರೆದಿದ್ದಾರೆ. ಸುಮಾರು ದೂರ ಕ್ರಮಿಸುವ ಈ ಮೆರವಣಿಗೆಗೆ ನಾಡಿನ ಜನ ಭಕ್ತಿ ಭಾವದಿಂದ ನಮಿಸಿದ್ದಾರೆ. ದಸರಾ ಕಣ್ತುಂಬಿಕೊಂಡು ಪಾವನರಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...