Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ..!

---Advertisement---

 

 

ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಪರ-ವಿರೋಧ ಎದುರಿಸಿದ್ದ ಜಾತಿಗಣತಿ ವರದಿ ಕಡೆಗೂ ಸಲ್ಲಿಕೆಯಾಗಿದೆ. ಈ ಜಾತಿ ಹಣತಿ ವರದಿಗೆ ಬಿಜೆಪಿಗರು ಮಾತ್ರವಲ್ಲ ಕಾಂಗ್ರೆಸ್ ನಲ್ಲೂ ಹಲವರ ವಿರೋಧವಿತ್ತು. ಆ ಎಲ್ಲಾ ವಿವಾದಗಳನ್ನು ದಾಟಿ ಇದೀಗ ಜಾತಿ ಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕಾರ ಮಾಡಿದ್ದಾರೆ.

 

ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ಸಲ್ಲಿಕೆ ಮಾಡಿದ್ದಾರೆ. ಈ ವರದಿಗೆ ಅನೇಕರ ವಿರೋಧವಿತ್ತು. 2014-15ರಲ್ಲಿ ಸಂಗ್ರಹವಾಗಿದ್ದ ಜಾತಿ ಗಣತಿ ಇದಾಗಿದೆ ಎನ್ನಲಾಗಿದೆ. ಹೀಗಾಗಿ ಹೊಸದಾಗಿಯೇ ವರದಿಯನ್ನು ತಯಾರಿಸಿ ಎಂದೇ ಹಲವರು ಅಭಿಪ್ರಾಯ ಪಟ್ಟಿದ್ದರು.

ಇದೀಗ ಈ ವರದಿ ಸಲ್ಲಿಸಿದ ಬಳಿಕ ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಜಾತಿಗಣತಿ ವರದಿಯನ್ನು ಸಲ್ಲಿಕೆ ಮಾಡಿದ್ದೇನೆ. ಇದು 2014-15ರಲ್ಲಿ ಸಂಗ್ರಹ ಮಾಡಿದ್ದೆವು. ಸಿಎಂ ಮುಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ಇಡುವುದಾಗಿ ಹೇಳಿದ್ದಾರೆ. ನಾವೂ ವರದಿಯನ್ನು ಸರ್ಕಾರಕ್ಕೆ ನೀಡಬೇಕಾಗಿತ್ತು. ನೀಡಿದ್ದೇವೆ. ಮುಂದಿನ ಬೆಳವಣಿಗೆ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ. ಸಂಪೂರ್ಣ ವರದಿ ನೋಡದೆ ಅವೈಜ್ಞಾನಿಕ ಎಂಬುದು ಸರಿಯಲ್ಲ. ಈ ವರದಿಯಲ್ಲಿ ಎಲ್ಲಾ ಸದಸ್ಯರ ಸಹಿಯೂ ಇದೆ. ಇದು ಕಾಂತರಾಜು ವರದಿಗೆ ಉತ್ತರ ನೀಡುವ ವರದಿಯಾಗಿದೆ ಎಂದಿದ್ದಾರೆ.

ಇನ್ನು ಇದೇ ವಿಚಾರವಾಗಿ ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, ಇದು ಜಾತಿಗಣತಿ ವರದಿ ಅಲ್ಲ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ವರದಿ. ಈ ವರದಿಗೆ ಯಾರದ್ದು ವಿರೋಧವಿಲ್ಲ. ಈಗ ವರದಿ ಸ್ವೀಕಾರ ಮಾಡುತ್ತೀವಿ. ಅದರಲ್ಲಿ ಏನು ಮಾಹಿತಿ ಇದೆ ಗೊತ್ತಿಲ್ಲ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment