Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ಸಲ ಕಪ್ ನಮ್ದೆ ಅಂತಿದ್ದಾರೆ ಸಿಎಂ ಸಿದ್ದರಾಮಯ್ಯ…!

---Advertisement---

 

ಬೆಂಗಳೂರು: ಕನ್ನಡಿಗರ ಮನಸ್ಸನ್ನ ಮತ್ತೆ ಮತ್ತೆ ಗೆಲ್ಲುತ್ತಿದ್ದಾರೆ ಸ್ಮೃತಿ ಮಂದಾನ. ನಿನ್ನೆ ಭಾನುವಾರ ಇಡೀ ಕನ್ನಡಿಗರ ಕಾತುರಕ್ಕೆ ಕಾರಣವಾಗಿ, ಜೈಕಾರಕ್ಕೆ ನಾಂದಿ ಹಾಡಿದ್ದು ಇದೇ ಸ್ಮೃತಿ ಮಂದಾನ ಅಂಡ್ ಟೀಂ. ಮಹಿಳಾ ಆರ್ ಸಿಬಿ ಟೀಂ ನಿನ್ನೆ ಕಪ್ ಗೆದ್ದು ಬೀಗಿದೆ. ಇದು ಕನ್ನಡಿಗರಿಗೆ ಸಂಭ್ರಮಕ್ಕೆ ಕಾರಣವಾಗಿದೆ.

ಡಿಸಿಯನ್ನು ಆರ್ಸಿಬಿ ಟೀಂ ಎಂಟು ವಿಕೆಟ್ ಗಳಿಂದ ಸೋಲಿಸಿದೆ. WPL ಪ್ರಶಸ್ತಿ ಗೆದ್ದು ಕನ್ನಡಿಗರ ಹೃದಯವನ್ನು ಕದ್ದಿದೆ. ಈ ಸಲ ಕಪ್ ನಮ್ಮದೇ ಎಂಬ ಆಸೆಯನ್ನು ಮಹಿಳಾ ಟೀಂ ಈಡೇರಿಸಿದೆ. ಹೆಮ್ಮೆಯಿಂದ ಕಪ್ ನಮ್ಮದಾಯ್ತು ಎಂದು ಹರ್ಷ ಪಡುತ್ತಿರುವ ಕನ್ನಡಿಗರಿಗೆ ಈಗ ಹುಡುಗರ ಮೇಲೆ ಚಿತ್ತ ನೆಟ್ಟಿದೆ‌. ಹುಡುಗಿಯರು ಗೆದ್ದಾಯ್ತು, ಹುಡುಗರು ಕಪ್ ಎತ್ತುತ್ತೀರಾ ಎಂಬ ಪ್ರಶ್ನೆ ಶುರುವಾಗಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಹಿಳಾ ಕ್ರಿಕೆಟರ್ಸ್ ಗಳಿಗೆ ಅಭಿನಂದನೆ ತಿಳಿಸಿದ್ದು, ಆರ್ಸಿಬಿ ಹುಡುಗರ ಆಟದ ಬಗ್ಗೆಯೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ‘ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯ ಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು.
ಈ ಸಲ ಕಪ್ ನಮ್ದೆ’ ಎಂದು ಸಂತಸದಿಂದ ಮೆಸೇಜ್ ರವಾನಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment