Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉತ್ತರ ಕನ್ನಡ ಜಿಲ್ಲೆಗೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ..!

---Advertisement---

ಉತ್ತರ ಕನ್ನಡ: ಕಳೆದ ಕೆಲವು ದಿನಗಳಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ನಿಲ್ಲುತ್ತಿಲ್ಲ. ಜನ ಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಸಾಕಷ್ಟು ಕಡೆ ಗುಡ್ಡ ಕುಸಿತ ಉಂಟಾಗಿದೆ. ಸಾವು-ನೋವುಗಳು ಸಂಭವಿಸಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ನಾಲಕೆ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಮೂಲಕ ಅಲ್ಲಿನ ಸ್ಥಿತಿಗತಿಯನ್ನು ಅರಿಯಲಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ.775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು’ ಎಂದಿದ್ದಾರೆ.

ಇನ್ನು ಮಳೆಯ ಆರ್ಭಟ ಇಂದಿಗೂ ನಿಂತಿಲ್ಲ. ರಾಜ್ಯದ ಹಲವೆಡೆ ನಿರಂತರವಾಗಿ ಮಳೆಯಾಗುತ್ತಲೇ ಇದೆ. ಅದರಲ್ಲೂ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಮಳೆಗಾಲದಲ್ಲಿ ಚಿಕ್ಕಮಗಳೂರು ಭಾಗಕ್ಕೆ ಪ್ರವಾಸಕ್ಕೆಂದು ಹೋಗುವವರೇ ಹೆಚ್ಚು. ಆದರೆ ಅಲ್ಲಿನ ಸ್ಥಳೀಯರ ಸೋಷಿಯಲ್ ಮೀಡಿಯಾ ಮೂಲಕ ಜನರಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಕಲ್ಲತ್ತಗಿರಿಯಲ್ಲಂತೂ ನೀರು ಉಕ್ಕಿ ಹರಿಯುತ್ತಿದೆ. ಹೀಗಾಗಿ ಪ್ರವಾಸಕ್ಕೆ ಎಂದು ಚಿಕ್ಕಮಗಳೂರು ಕಡೆಗೆ ಬರುವ ದುಸ್ಸಾಹಸಕ್ಕೆ ಕೈಬಹಾಕಬೇಡಿ. ಎಲ್ಲಾ ಕಡೆ ನೀರಿನ ಮಟ್ಟ ತುಂಬಿ ಹರಿಯುತ್ತಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...