Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಸ್ತಬ್ಧ ಚಿತ್ರ ನಿರಾಕರಣೆ : ರಾಜನಾಥ್ ಸಿಂಗ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

---Advertisement---

 

ಬೆಂಗಳೂರು: ಈ ಬಾರಿಯೂ ಕರ್ನಾಟಕದ ಸ್ತಬ್ಧ ಚಿತ್ರವನ್ನು ನಿರಾಕರಣೆ ಮಾಡಲಾಗಿದೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ನಮ್ಮ ಕರ್ನಾಟಕದ ಸ್ತಬ್ಧ ಚಿತ್ರ ಈ ಬಾರಿ ಪ್ರದರ್ಶನವಾಗುತ್ತಿಲ್ಲ. ಇದು ಸಿಎಂ ಸಿದ್ದರಾಮಯ್ಯ ಅವರ ಬೇಸರಕ್ಕೆ ಕಾರಣವಾಗಿದೆ. ಈಗಾಗಲೇ ಈ ಬೇಸರವನ್ನು ಹೊರ ಹಾಕಿದ್ದಾರೆ. ಇದೀಗ ಈ ಸಂಬಂಧ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ 15 ವರ್ಷಗಳಿಂದ ಕರ್ನಾಟಕ ಕರ್ತವ್ಯ ಪಥದಲ್ಲಿ ನಡೆಯುವ ಪೆರೇಡ್‌ನಲ್ಲಿ ಭಾಗಿಯಾಗಿ ಹಲವು ಪ್ರಶಸ್ತಿ ಗಳಿಸಿದೆ. ಬ್ರ್ಯಾಂಡ್ ಬೆಂಗಳೂರು ಟ್ಯಾಬ್ಲೊ ಪರೇಡ್‌ನಲ್ಲಿ ಬೆಂಗಳೂರನ್ನು ಪ್ರತಿನಿಧಿಸುತ್ತೆ. ಬೆಂಗಳೂರು ಯುನೆಸ್ಕೋದ ಎರಡನೇ ಬೆಸ್ಟ್ ಸುಂದರ ಏರ್​ಪೋರ್ಟ್ ಎಂಬ ಖ್ಯಾತಿ ಗಳಿಸಿದೆ. ಪೆರೇಡ್‌ಗೆ ಅವಕಾಶ ನೀಡದಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ನೀಡಬೇಕು‌. ಜನವರಿ 26ರಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಸ್ತಬ್ಧಚಿತ್ರ, ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರವನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ವಿಚಾರ ತಿಳಿಸಿ, ಮನವಿ ಮಾಡಿದ್ದಾರೆ.

ಈ ಬಗ್ಗೆ ಈಗಾಗಲೇ ವಿಜಯೇಂದ್ರ ಅವರು ಮಾತನಾಡಿ, ಬೇರೆ ರಾಜ್ಯಗಳಿಗೂ ಅವಕಾಶ ಕೊಡುವ ನಿಟ್ಟಿನಲ್ಲಿ ಈ ರೀತಿಯ ನಿರ್ಧಾರ ಮಾಡಿದ್ದಾರೆ. ಮುಂದಿನ ವರ್ಷ ಕೊಡುತ್ತಾರೆ ಎಂದಿದ್ದಾರೆ. ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೆ ಇರುವುದಕ್ಕೆ ರಾಜ್ಯದ ಜನರಲ್ಲೂ ಬೇಸರ ವ್ಯಕ್ತವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment