Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

---Advertisement---

 

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ ಇದ್ದಾರೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಒಂದು ನಿರ್ಧಾರಕ್ಕೆ ಬಂದಿದ್ದು, ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿ ಮಾಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಿದ್ದಾರೆ.

ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದು, ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಈಗಾಗಲೇ ವಾರೆಂಟ್ ಜಾರಿಯಾಗಿದೆ. ಅದರ ಆಧಾರದ ಮೇಲೆ ಪಾಸ್ ಪೋರ್ಟ್ ರದ್ದು ಕೋರಿ ಪತ್ರ ಬರೆಯಲಾಗಿದೆ. ಪಾಸ್ ಪೋರ್ಟ್ ರದ್ದು ಮಾಡಿದರೆ ಪ್ರಜ್ವಲ್ ಭಾರತಕ್ಕೆ ಬರಲೇಬೇಕಾಗುತ್ತದೆ ಎಂದಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಅವರಿಗೆ ಶರಣಾಗುವಂತೆ ಹೇಳಿರುವ ವಿಚಾರವಾಗಿ ಮಾತನಾಡಿ, ಇದು ಅವರ ಕುಟುಂಬದ ಆಂತರಿಕ ವಿಚಾರ. ಸರ್ಕಾರದ ವತಿಯಿಂದ ಯಾರ ಫೋನ್ ಟ್ಯಾಪ್ ಮಾಡಿಲ್ಲ. ಒಂದು ವೇಳೆ ಫೋನ್ ಟ್ಯಾಪ್ ಆಗಿದ್ದರೆ ದಾಖಲೆ ಕೊಡಲಿ, ತನಿಖೆ ಮಾಡಿಸುತ್ತೇವೆ ಎಂದಿದ್ದಾರೆ.

ಇದೇ ವೇಳೆ ದೇವರಾಜೇಗೌಡ ಬಗ್ಗೆ ಮಾತನಾಡಿ, ವಕೀಲ ದೇವರಾಜೇಗೌಡ ಆಡಿಯೋ ಬಗ್ಗೆ ಎಸ್ಐಟಿ ನೋಡಿಕೊಳ್ಳುತ್ತದೆ. ಪ್ರತಿಯೊಂದು ಹಂತದಲ್ಲಿ ತನಿಖೆ ಮಾಡುವುದಕ್ಕೆ ನಾವೂ ಹೇಳಲ್ಲ. ತನಿಖೆ ಮಾಡಲು ಎಸ್ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಹೆಚ್.ಡಿ. ಕುಮಾರಸ್ವಾಮಿ ಅವರು ಅದ್ಯಾವ ಉದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಬಹಳ ಕೆಲಸವಿದೆ. ಆಡಳಿತ ನಡೆಸಬೇಕು. ಇಡೀ ದೇಶ ನಮ್ಮ ಕಾಂಗ್ರೆಸ್ ಸರ್ಕಾರದ ಕಡೆಗೆ ನೋಡುತ್ತಿದೆ ಎಂದು ದೇವೇಗೌಡರ ಕುಟುಂಬ ಮುಗಿಸಲು ಷಡ್ಯಂತ್ರ ನಡೆಸುತ್ತಿದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment