Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿ ಚಲೋಗೆ ಬೆಂಬಲ ನೀಡುವಂತೆ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪತ್ರ

---Advertisement---

 

 

ನವದೆಹಲಿ: ಇತ್ತಿಚೆಗಷ್ಟೇ ಕೇಂದ್ರ ಸರ್ಕಾರದಿಂದ ಮಧ್ಯಂತರ ಬಜೆಟ್ ಘೋಷಣೆ ಮಾಡಲಾಗಿತ್ತು. ಆದರೆ ರಾಜ್ಯಕ್ಕೆ ಬರಬೇಕಾದಷ್ಟು ಅನುದಾನ ಸಿಕ್ಕಿಲ್ಲ ಎಂದು ರಾಜ್ಯ ಸರ್ಕಾರ ಕಿಡಿಕಾರಿದೆ. ಈ ಹಿನ್ನೆಲೆ ನಾಳೆ ದೆಹಲಿ ಚಲೋ ನಡೆಸಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರದ ತಾರತಮ್ಯ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದು, ಎಲ್ಲರೂ ಈ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಸಿಎಂ ಮನವಿ ಮಾಡಿದ್ದಾರೆ.

ಅನುದಾನ ತಾರತಮ್ಯ ಖಂಡಿಸಿ, ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಯಲಿದ್ದು, ಈ ಹೋರಾಟದಲ್ಲಿ ಭಾಗಿಯಾಗಬೇಕೆಂದು ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಸಂಸದರಿಗೂ ತಿಳಿಸಿದ್ದಾರೆ. ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸುವಂತೆ ತಿಳಿಸಿದ್ದಾರೆ. ಇದರ ಜೊತೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೂ ಪತ್ರ ಬರೆದು, ಬೆಂಬಲ ಕೋರಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಡಿವಿ ಸದಾನಂದಗೌಡ ಸೇರಿದಂತೆ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರಿಗೂ ಪತ್ರ ಬರೆದಿದ್ದಾರೆ.

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ನಿನ್ನೆಯೇ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದರು. ಇದು ಸರ್ಕಾರದ ಹೋರಾಟ. ಕಾಂಗ್ರೆಸ್-ಬಿಜೆಪಿಗೆ ಸಂಬಂಧವಿಲ್ಲ. ಕೇಂದ್ರ ಸರ್ಕಾರದ ಗಮನ ಸೆಳೆಯಲು ಈ ಹೋರಾಟ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಹಾಗೂ ನಾವೂ ಸದಾ ಜನರ ಧ್ವನಿಯಾಗಿರುತ್ತೇವೆ. ನಮ್ಮ ಅನುದಾನ ನಮ್ಮ ಹಕ್ಕು. ನಮಗೆ ಸಿಗಬೇಕಾದ ಪಾಲು ಕೊಡಿಸುವುದು ನಮ್ಮ ಕರ್ತವ್ಯ. ಕೇಂದ್ರ ಸರ್ಕಾರದ ಬಳಿ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment