ಸುದ್ದಿಒನ್,ಬೆಂಗಳೂರು,ಮೇ.23: ಸಿಎಂ ಸಿದ್ದರಾಮಯ್ಯ ನಾಳೆ (ಭಾನುವಾರ, ಮೇ 24, 2026) ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕೈಗೊಳ್ಳಬೇಕಾಗಿದ್ದ ತಮ್ಮ ಅಧಿಕೃತ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ರದ್ದುಗೊಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿಯಾದ ಕೆ. ಚಿರಂಜೀವಿ ಅವರು ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ.24 ರ ಭಾನುವಾರ ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗೊಳ್ಳಬೇಕಾಗಿದ್ದ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ರದ್ದುಪಡಿಸಿರುತ್ತಾರೆಂದು ತಮಗೆ ತಿಳಿಸಲು ನಿರ್ದೇಶಿತನಾಗಿದ್ದೇನೆ. ಎಂದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ.










