Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿ ಮುಂಬೈ ಹೋದ ಬೆನ್ನಲ್ಲೇ ಶುರುವಾಯ್ತಾ ಸಿಎಂ ಟೆನ್ಶನ್..!

---Advertisement---

 

ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೂ ಸರ್ಕಾರದ ಬಗ್ಗೆ ಕೊಂಚ ಭಯವೂ ಇದ್ದಂತೆ ಇದೆ. ಆಪರೇಷನ್ ಕಮಲಕ್ಕೆ ಸರ್ಕಾರವೆಲ್ಲಿ ನಡುಗಿ ಬಿಡುತ್ತದೋ ಎಂಬ ಆತಂಕ. ಮೊದಲೇ ಜೆಡಿಎಸ್, ಬಿಜೆಪಿ ನಾಯಕರು ಆಗಾಗ ಸರ್ಕಾರ ಉರುಳುವ ಮಾತನ್ನೇ ಆಡುತ್ತಿದ್ದಾರೆ. ಈಗಾಗಲೇ ಸರ್ಕಾರದ ಕೆಲ ಶಾಸಕರಿಗೆ ಬಿಜೆಪಿಗರಿಂದ ಕರೆ ಕೂಡ ಬಂದಿದೆ ಎನ್ನಲಾಗಿದೆ. ಇದರ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮುಂಬೈ ಪ್ರವಾಸ ಬೆಳೆಸಿದ್ದಾರೆ.

ಕುಮಾರಸ್ವಾಮಿ ಅವರು ಮುಂಬೈಗೆ ಹೋದ ಕೂಡಲೇ ಇತ್ತ ಸಿಎಂ ಸಿದ್ದರಾಮಯ್ಯ ಅವರು ಟೆನ್ಶನ್ ಆಗಿದ್ದಾರೆ ಎನ್ನಲಾಗುತ್ತಿದೆ. ಯಾಕಂದ್ರೆ ಆಪರೇಷನ್ ಕಮಲಕ್ಕೆ ನಮ್ಮ ಶಾಸಕರು ಸಿಲುಕಿ ಬಿಟ್ಟರೆ ಎಂಬ ಭಯ. ಕುಮಾರಸ್ವಾಮಿ ಅವರ ಹಿಂದೆ ಯಾರಾದರೂ ಮುಂಬೈ ಪ್ರವಾಸಕ್ಕೆ ಹೋಗುತ್ತಾರಾ ಎಂಬುದರ ಮೇಲೆ‌ನಿಗಾ ವಹಿಸಿದ್ದಾರಂತೆ.

ಕಳೆದ ಬಾರಿ ಸಮ್ಮಿಶ್ರ ಸರ್ಕಾರವನ್ನು ಇದೇ ಆಪರೇಷನ್ ಕಮಲದ ಮೂಲಕ ಕೆಡವಲಾಗಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆದರೆ ಆರು ತಿಂಗಳಷ್ಟೇ ಸಿಎಂ ಹುದ್ದೆಯಲ್ಲಿ ಇದ್ದರು. ಹೀಗಾಗಿ ಈ ಬಾರಿಯೂ ಸರ್ಕಾರ ಕೆಡವಲು ಪ್ಲ್ಯಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ ಸಮ್ಮಿಶ್ರ ಸರ್ಕಾರ ಕೆಡುವುದು ಅಷ್ಟು ಸುಲಭವಾಗಿಲ್ಲ. ಬಿಜೆಪಿ ಜೆಡಿಎಸ್ ಎರಡು ಪಕ್ಷದ ಶಾಸಕರು ಸೇರಿದರು 90 ದಾಟಲ್ಲ. ಕಾಂಗ್ರೆಸ್ 135 ಸ್ಥಾನಗಳಿಂದ ಬಹುಮತ ಪಡೆದು ಗೆದ್ದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...