ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೂ ಸರ್ಕಾರದ ಬಗ್ಗೆ ಕೊಂಚ ಭಯವೂ ಇದ್ದಂತೆ ಇದೆ. ಆಪರೇಷನ್ ಕಮಲಕ್ಕೆ ಸರ್ಕಾರವೆಲ್ಲಿ ನಡುಗಿ ಬಿಡುತ್ತದೋ ಎಂಬ ಆತಂಕ. ಮೊದಲೇ ಜೆಡಿಎಸ್, ಬಿಜೆಪಿ ನಾಯಕರು ಆಗಾಗ ಸರ್ಕಾರ ಉರುಳುವ ಮಾತನ್ನೇ ಆಡುತ್ತಿದ್ದಾರೆ. ಈಗಾಗಲೇ ಸರ್ಕಾರದ ಕೆಲ ಶಾಸಕರಿಗೆ ಬಿಜೆಪಿಗರಿಂದ ಕರೆ ಕೂಡ ಬಂದಿದೆ ಎನ್ನಲಾಗಿದೆ. ಇದರ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮುಂಬೈ ಪ್ರವಾಸ ಬೆಳೆಸಿದ್ದಾರೆ.
ಕುಮಾರಸ್ವಾಮಿ ಅವರು ಮುಂಬೈಗೆ ಹೋದ ಕೂಡಲೇ ಇತ್ತ ಸಿಎಂ ಸಿದ್ದರಾಮಯ್ಯ ಅವರು ಟೆನ್ಶನ್ ಆಗಿದ್ದಾರೆ ಎನ್ನಲಾಗುತ್ತಿದೆ. ಯಾಕಂದ್ರೆ ಆಪರೇಷನ್ ಕಮಲಕ್ಕೆ ನಮ್ಮ ಶಾಸಕರು ಸಿಲುಕಿ ಬಿಟ್ಟರೆ ಎಂಬ ಭಯ. ಕುಮಾರಸ್ವಾಮಿ ಅವರ ಹಿಂದೆ ಯಾರಾದರೂ ಮುಂಬೈ ಪ್ರವಾಸಕ್ಕೆ ಹೋಗುತ್ತಾರಾ ಎಂಬುದರ ಮೇಲೆನಿಗಾ ವಹಿಸಿದ್ದಾರಂತೆ.
ಕಳೆದ ಬಾರಿ ಸಮ್ಮಿಶ್ರ ಸರ್ಕಾರವನ್ನು ಇದೇ ಆಪರೇಷನ್ ಕಮಲದ ಮೂಲಕ ಕೆಡವಲಾಗಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆದರೆ ಆರು ತಿಂಗಳಷ್ಟೇ ಸಿಎಂ ಹುದ್ದೆಯಲ್ಲಿ ಇದ್ದರು. ಹೀಗಾಗಿ ಈ ಬಾರಿಯೂ ಸರ್ಕಾರ ಕೆಡವಲು ಪ್ಲ್ಯಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ ಸಮ್ಮಿಶ್ರ ಸರ್ಕಾರ ಕೆಡುವುದು ಅಷ್ಟು ಸುಲಭವಾಗಿಲ್ಲ. ಬಿಜೆಪಿ ಜೆಡಿಎಸ್ ಎರಡು ಪಕ್ಷದ ಶಾಸಕರು ಸೇರಿದರು 90 ದಾಟಲ್ಲ. ಕಾಂಗ್ರೆಸ್ 135 ಸ್ಥಾನಗಳಿಂದ ಬಹುಮತ ಪಡೆದು ಗೆದ್ದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











