Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭದ್ರ ಮೇಲ್ದಂಡೆ & ರಮೇಶ್ ಜಾರಕಿಹೊಳಿ ಚರ್ಚಿಸಲು ಸಿಎಂ ದೆಹಲಿ ಪ್ರಯಾಣ..!

Facebook
Twitter
Telegram
WhatsApp

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಮಧ್ಯಾಹ್ನದ ವಿಮಾನವನ್ನು ಏರಿ ದೆಹಲಿ ತಲುಪಲಿದ್ದಾರೆ. ಇಂದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಎರಡು ಮುಖ್ಯ ವಿಚಾರಗಳನ್ನು ಚರ್ಚೆ ನಡೆಸಲಿದ್ದಾರೆ.

2023-24ರ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕದ ಭದ್ರಾ ಮೇಲ್ದಂಡೆಗೆ ಅನುದಾನ ಮೀಸಲಿಟ್ಟಿದ್ದಾರೆ. ಸುಮಾರು 5,300 ಕೋಟಿ ಅನುದಾನ ನೀಡಲಾಗಿದೆ. ಈ ಯೋಜನೆಯಿಂದಾಗಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ನೀರು ಹರಿಸುವ ವ್ಯವಸ್ಥೆ ಇದಾಗಿದೆ. ಹೀಗಾಗಿ ಈ ಯೋಜನೆಗೆ ಹಣ ಮೀಸಲಿಟ್ಟಿದ್ದಕ್ಕಾಗಿ ವರಿಷ್ಠರನ್ನು ಭೇಟಿಯಾಗಿ ಧನ್ಯವಾದ ತಿಳಿಸಲಿದ್ದಾರೆ.

ಇನ್ನು ರಮೇಶ್ ಜಾರಕಿಹೊಳಿ ಸಿಡಿ ಕೇಸನ್ನು ಸಿಬಿಐಗೆ ವಹಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಅದಕ್ಕಾಗಿ ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತಿದ್ದಾರೆ. ಈಗಾಗಲೇ ಸಿಎಂ ಬೊಮ್ಮಾಯಿ ಅವರ ಬಳಿಯೂ ಚರ್ಚೆ ನಡೆಸಿದ್ದಾರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿಯೂ ಚರ್ಚೆ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಅವರು ದೆಹಲಿಗೆ ಪ್ರಯಾಣ ಬೆಳೆಸುತ್ತಿರುವ ಕಾರಣ ರಮೇಶ್ ಜಾರಕಿಹೊಳಿ ಅವರು ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಇನ್ನು ಬೊಮ್ಮಾಯಿ ಅವರು ವರಿಷ್ಠರಿಗೆ ಈ ಬಗ್ಗೆ ಚರ್ಚೆ ನಡೆಸಿ, ಸಿಬಿಐಗೆ ವಹಿಸುವುದರಿಂದ ಏನೆಲ್ಲಾ ಲಾಭ ಇದೆ ಎಂಬುದನ್ನು ಚರ್ಚೆ ನಡೆಸಲಿದ್ದಾರೆ. ಇಂದು ರಾತ್ರಿಯೇ ಅಲ್ಲಿಂದ ವಾಪಾಸ್ ಆಗಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ಬಂದು

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ. ಕ್ಷೇತ್ರ ವ್ಯಾಪ್ತಿಯ ಪಾವಗಡ

error: Content is protected !!