ಬೂಸ್ಟರ್ ಡೋಸ್ ಬಗ್ಗೆ ಚರ್ಚಿಸಲು ದೆಹಲಿಗೆ ಸಿಎಂ ಪ್ರಯಾಣ..!

1 Min Read

ಬೆಂಗಳೂರು: ಎಲ್ಲೆಲ್ಲೂ ಹೊಸ ವೈರಸ್ ನ ಆತಂಕ ಹೆಚ್ಚಾಗಿದೆ. ಸದ್ಯ ವ್ಯಾಕ್ಸಿನ್ ಎಲ್ಲರಿಗೂ ತಲುಪುವಂತೆ ನೋಡಿಕೊಳ್ಳಲಾಗಿದೆ. ಈ ಮಧ್ಯೆ ಬೂಸ್ಟರ್ ಡೋಸ್ ಬಗ್ಗೆ ಚರ್ಚಿಸಿ ಅನುಮತಿ ಪಡೆಯಲು ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ‌ ಬೆಳಗ್ಗೆ 9.45ಕ್ಕೆ ಬೆಂಗಳೂರಿಂದ ಸಿಎಂ ಹೊರಡಲಿದ್ದಾರೆ. ಮಧ್ಯಾಹ್ನ ‌12.40ಕ್ಕೆ ದೆಹಲಿಗೆ ತಲುಪಲಿದ್ದು, ಬಳಿಕ ಕೇಂದ್ರದ ವಿವಿಧ ಸಚಿವರನ್ನು ಭೇಟಿ ಮಾಡಲಿದ್ದಾರೆ.

ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಕುರಿತು ಚರ್ಚೆ ನಡೆಸಲಿರುವ ಸಿಎಂ ಬೊಮ್ಮಾಯಿ ಅವರು, ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ ಭೇಟಿ ಮಾಡಲಿದ್ದಾರೆ.

ಇನ್ನು ಬೂಸ್ಟರ್ ಡೋಸ್ ನೀಡುವ ಬಗ್ಗೆ ತಜ್ಞರಿಂದ ಕೆಲವೊಂದಿಷ್ಟು ಅಭಿಪ್ರಾಯ ವ್ಯಕ್ತವಾಗಿರುವ ಹಿನ್ನೆಲೆ ಒಪ್ಪಿಗೆ ಪಡೆಯಲಿರುವ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ ಒಮಿಕ್ರಾನ್ ಗೆ ರಾಜ್ಯದಲ್ಲಿ ಮಾಡಿಕೊಂಡ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಿದ್ದಾರೆ. ನಾಳೆ ಸಂಜೆ ದೆಹಲಿಯಲ್ಲೇ ಉಳಿದುಕೊಂಡು ಶುಕ್ರವಾರ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಅಂದೇ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *