Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಅಂಕಲ್, ಹೆಣ್ಮಕ್ಕಳು ಶಾಲೆಗೆ ಬರೋದಾದ್ರೂ ಹೇಗೆ? : ಕಾಂಗ್ರೆಸ್ ಹೊಸ ಅಭಿಯಾನ

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೆ ಹರಿಹಾಯ್ದಿದೆ. ಸರಣಿ ಟ್ವೀಟ್ ಮೂಲಕ ಹಲವೂ ಪ್ರಶ್ನೆಗಳನ್ನು ಕೇಳಿದೆ. #ಸಿಎಂಅಂಕಲ್ ಹ್ಯಾಷ್ ಟ್ಯಾಗ್ ಬಳಸಿ ಪ್ರಶ್ನಿಸಲಾಗಿದೆ.

ಹೆಣ್ಮಕ್ಕಳು ಶಾಲೆಗೆ ಬರೋದಾದ್ರೂ ಹೇಗೆ? ರಾಜ್ಯದ ಹಲವು ಶಾಲೆಗಳಲ್ಲಿ ಹೆಣ್ಮಕ್ಳಿಗೆ ಶೌಚಾಲಯ ಇಲ್ಲದೆ ತುಂಬಾ ಕಷ್ಟ ಆಗ್ತಿದೆ. ಬೇಟಿ ಬಚಾವೋ, ಬೇಟಿ ಪಡಾವೋ ಅಂತ ಪಿಎಂ ಅಂಕಲ್ ಹೇಳ್ತಿದ್ರು, ಆದರೆ ಇಲ್ಲಿ ‘ಬಚಾವೋ’ ಆಗ್ತಿಲ್ಲ, ‘ಪಡಾವೋ’ನೂ ಆಗ್ತಿಲ್ಲ ಏಕೆ ಸಿಎಂ ಅಂಕಲ್?. ಕೇಸರಿ ಬಣ್ಣದ್ದದರೂ ಸರಿ ನಮಗೊಂದು ಶೌಚಾಲಯ ಕಟ್ಟಿಸಿಕೊಡಿ.

ಕೋವಿಡ್ ಹೆಸರಲ್ಲಿ 2 ವರ್ಷ ನಮ್ಮ ವಿದ್ಯಾಭ್ಯಾಸ ಹಾಳು ಮಾಡಿದ್ರಿ, ಈಗ ಶೈಕ್ಷಣಿಕ ಸವಲತ್ತು, ಮೂಲಭೂತ ಸೌಕರ್ಯ ಕೊಡದೆ ನಮ್ಮ ವಿದ್ಯಾಭ್ಯಾಸ ಹಾಳು ಮಾಡ್ತಿದೀರಿ. ನಿಮ್ ಮಕ್ಳು ಮಾತ್ರ ಓದಿ ದೊಡ್ಡ ದೊಡ್ಡ ಸಾಧನೆ ಮಾಡ್ಬೇಕು, ಉದ್ಯಮ ಕಟ್ಟಬೇಕು, ನಾವೂ ಆ ಸಾಧನೆ ಮಾಡೋದು ನಿಮಗೆ ಇಷ್ಟ ಇಲ್ವಾ ಸಿಎಂ ಅಂಕಲ್?

ಶಿಕ್ಷಣ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಕರ್ನಾಟಕ 14ನೇ ಸ್ಥಾನಕ್ಕೆ ಕುಸಿದಿದೆಯಂತೆ, ಹಾಗಂತ ಪೇಪರ್‌ನಲ್ಲಿ ಬಂದಿತ್ತು. ನಮಗೆ ಸೂಚ್ಯಂಕದ ಬಗ್ಗೆ ಗೊತ್ತಿಲ್ಲ, ಆದ್ರೆ ನಮಗೆ ಶಾಲೆಯಲ್ಲಿ ಯಾವ ಸೌಕರ್ಯವೂ ಸಿಗ್ತಿಲ್ಲ, ಶಾಲೆಗೆ ಬಂದರೆ ಯಾವುದೋ ಬಸ್ ಸ್ಟ್ಯಾಂಡ್‌ಗೆ ಬಂದಂತೆ ಆಗುತ್ತಿದೆ. ಯಾಕೆ ಈ ಅನ್ಯಾಯ ಮಾಡ್ತಿದೀರಿ ಸಿಎಂ ಅಂಕಲ್?

ಸರ್ಕಾರಿ ಶಾಲೆಗಳಷ್ಟೇ ಅಲ್ಲ, ಖಾಸಗಿ ಶಾಲೆಗಳಿಗೂ ಪಠ್ಯಪುಸ್ತಕ ಕೊಡಲಿಲ್ಲ ಏಕೆ? ನಾವು ಶಾಲೆಗಳಿಗೆ ಬಣ್ಣ ನೋಡಲು ಬರಬೇಕಾ, ಪಾಠ ಕಲಿಯಲು ಬರಬೇಕಾ ಅಂಕಲ್? ಅರ್ಧ ವರ್ಷ ಕಳೆದರೂ ಪುಸ್ತಕವನ್ನೇ ಕೊಟ್ಟಿಲ್ಲ ಅಂದ್ರೆ ನಾವು ಓದಿ ಎಕ್ಸಾಮ್ ಬರೆಯೋದು ಹೇಗೆ ಸಿಎಂ ಅಂಕಲ್? ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

error: Content is protected !!