ರಾಜ್ಯದ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಚತೆ ಕಾರ್ಯ ನಿರ್ವಹಿಸುತ್ತಿರುವವರನ್ನು ಏಕ ಕಾಲಕ್ಕೆ ಖಾಯಂ ಮಾಡುವಂತೆ ಆಗ್ರಹಿಸಿ ಸಾಂಕೇತಿಕ ಧರಣಿ

ಚಿತ್ರದುರ್ಗ,(ಮೇ.19) :  ರಾಜ್ಯದ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಚತೆ ಕಾರ್ಯ ನಿರ್ವಹಿಸುತ್ತಿರುವವರನ್ನು ಸಚಿವ ಸಂಪುಟದ ತೀರ್ಮಾನದಂತೆ ಏಕ ಕಾಲಕ್ಕೆ ಖಾಯಂ ಮಾಡುವಂತೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಂಕೇತಿಕ ಧರಣಿಯನ್ನು ನಡೆಸಲಾಯಿತು.

ರಾಜ್ಯ ನಗರಸಭೆ,ಪುರಸಭೆ,ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಮಹಾ ಸಂಘ, ರಾಜ್ಯ ನಗರ ಪಾಲಿಕೆ ನಗರಸಭೆ ಪುರಸಭೆ, ಪಟ್ಟಣ ಪಂಚಾಯಿತಿ ಹೂರಗುತ್ತಿಗೆ ನೌಕರರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಪೌರ ಕಾರ್ಮಿಕರ ಸಂಘದ ಸಂಯುಕ್ತಾಶ್ರಯದಲ್ಲಿ ಕೆಲಸ ಖಾಯಂಗಾಗಿ ಧರಣಿಯನ್ನು ಹಮ್ಮಿಕೊಂಡಿದ್ದು, ಈ ಸಂಸ್ಥೆಗಳಲ್ಲಿ ಕೆಲಸವನ್ನು ಮಾಡುತ್ತಿರುವ ಗುತ್ತುಗೆದಾರರ ಸ್ಥಿತಿ ಶೋಚನೀಯವಾಗಿದೆ.

ಸಂಘಟನೆಯ ಹೋರಾಟದ ಫಲವಾಗಿ 2017-18ನೇ ಸಾಲಿನಲ್ಲಿ ಅಂದಿನ ಕಾಂಗ್ರೇಸ್ ಸರ್ಕಾರ ಎಲ್ಲರನ್ನು ಖಾಯಂ ಮಾಡಲು ನಿರ್ಣಯ ಮಾಡಿತು ಆದರೆ ದಲಿತ ಪೌರ ಕಾರ್ಮೀಕರ ವಿರೋಧಿ ಅಧಿಕಾರಿಗಳು ಸಚಿವ ಸಂಪುಟದ ನಿರ್ಣಯನ್ನು ಯಥಾವತ್ತಾಗಿ ಅನುಷ್ಠಾನ ಮಾಡದೇ ಪೌರ ಕಾರ್ಮಿಕರ ವಿಶೇಷ ನೇಮಕಾತಿ ನಿಯಮಗಳು 2017-18 ಎಂಬ ಪೌರ ಕಾರ್ಮಿಕರ ಬದುಕನ್ನು ನಾಶ ಮಾಡುವಂತ ನಿಯಮಗಳನ್ನು ಜಾಸ್ತಿ ಮಾಡಿದ್ದಾರೆ. ಕಾರ್ಮಿಕರನ್ನು ಬೇರೆ ಬೇರೆಯಾಗಿ ಮಾಡಿದ್ದಾರೆ ಎಂದು ದೂರಿದ್ದಾರೆ.

ಗುತ್ತಿಗೆ ಪದ್ದತಿಯನ್ನು ರದ್ದು ಮಾಡಲು ಒಪ್ಪದ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮಿಲಾಗಿ ಪೌರ ಕಾರ್ಮಿಕರನ್ನೆ ಅಸಂಭದ್ದ ಗುಂಪುಗಳಾಗಿ ಮಾಡಿ ಬೆರಳಣಿಕೆಷ್ಟು ಜನರನ್ನು ಮಾತ್ರ ಲಂಚ ಪಡೆದು ಖಾಯಂ ಮಾಡುವುದರ  ಮೂಲಕ ರಾಜ್ಯ ಸಚಿವ ಸಂಪುಟದ ನಿರ್ಣಯವನ್ನು ಉಲ್ಲಂಘಟನೆ ಮಾಡಿ ಪೌರ ಕಾರ್ಮಿಕರಿಗೆ ಮೋಸ ಮಾಡಿದ್ದಾರೆ. ಕೆಲವೊಂದು ಅಧಿಕಾರಿಗಳು ನಮ್ಮ ಸಂಘಟನೆಯನ್ನು ಒಡೆಯುವ ಕಾರ್ಯವನ್ನು ಮಾಡಿದ್ದಾರೆ.

ಕರೋನಾ ಸಮಯದಲ್ಲಿ ಕೆಲಸ ಮಾಡಿದರು ಸಹಾ ನಮೆಗ ಸರಿಯಾದ ರೀತಿಯಲ್ಲಿ ವೇತನ ಸಿಕ್ಕಿಲ್ಲ, ಅದರಲ್ಲೂ ಸಹಾ ತಾರತಮ್ಯ ಮಾಡುತ್ತಿದ್ದಾರೆ. ಸೂಕ್ತವಾದ ವ್ಯದ್ಯಕೀಯ ಸೌಲಭ್ಯ ಇಲ್ಲ, ಸುರಕ್ಷತೆಯಂತೊ ಇಲ್ಲವೇ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ.

ವಾರದ ರಜೆ, ಮಾಸಿಕ ರಜೆ ಇಲ್ಲ, ಹೆಣ್ಣು ಮಕ್ಕಳಿಗೆ ಹೆರಿಗೆ ರಜೆ ಭತ್ಯೆಗಳು ಇಲ್ಲವಾಗಿದೆ. ಮೂಲಭೂತ ಸೌಲಭ್ಯಗಳು ಸಹಾ ನೀಡಿಲ್ಲ, 60 ವರ್ಷ ಮೇಲ್ಪಟ್ಟು ಕೆಲಸದಿಂದ ನಿವೃತ್ತಿಯಾಗುವವರಿಗೆ ಯಾವುದೇ ರೀತಿಯ ನಿವೃತ್ತಿಯ ಸೌಕರ್ಯಗಳು ಸಿಕ್ಕಿಲ್ಲ, ನಮಗೆ ಸುರಕ್ಷತೆ, ಭದ್ರತೆಯ ಕಾನೂನುಗಳು ಇಲ್ಲವಾಗಿದೆ. ಪೌರ ಕಾರ್ಮಿಕರಾಗಿ ಕೆಲಸವನ್ನು ಮಾಡುತ್ತಿರುವ ನಾವೇಲ್ಲಾ ಒಂದೇ ನಮ್ಮನ್ನು ಪ್ರತ್ಯೇಕ ಮಾಡಬೇಡಿ, ಸಾಲಪ್ಪನವರ ವರದಿಯ ಪ್ರಕಾರ ನಾವೆಲ್ಲಾ ಒಂದೇ ನಮ್ಮನ್ನು ಕೊಡಲೇ ಖಾಯಂ ಮಾಡಲು ಆದೇಶವನ್ನು ಮಾಡಬೇಕು, ಕಾರ್ಮಿಕ ಕಾನೂನು ಪ್ರಕಾರ ನಮಗೆ ಸಿಗಬೇಕಾದ ಸೌಲಭ್ಯಗಳುನ ನ್ಯಾಯಯುತವಾಗಿ ದೂರಕಬೇಕಿದೆ.

ಮುಂದಿನ ಒಂದು ತಿಂಗಳೊಳಗಾಗಿ ಖಾಯಂ ಆದೇಶವನ್ನು ಹೊರಡಿಸಬೇಕು ತಪ್ಪಿದಲ್ಲಿ ಅರ್ನಿದೀಷ್ಠವಾಗಿ ಸ್ಥಗಿತ ಮುಷ್ಕರ ನಡೆಸಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಧರಣಿಯಲ್ಲಿ ಜಿಲ್ಲಾಧ್ಯಕ್ಷ ದುರುಗೇಶ್, ಉಪಾಧ್ಯಕ್ಷ ಜಗದೀಶ್, ರಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಸಹಾ ಕಾರ್ಯದರ್ಶೀ ಮಂಜಣ್ಣ, ಖಂಜಾಚಿ ಮರಿಯಪ್ಪ, ನಿರ್ದೇಶಕರಾಧ ಮಂಜುನಾಥ್, ದುರುಗಪ್ಪ, ಜಯಣ್ಣ, ಕೆ.ಕುಮಾರ್, ಚಿಕ್ಕಣ್ಣ ನೇತೃತ್ವವನ್ನು ವಹಿಸಿದ್ದರು.

suddionenews

Recent Posts

ಬೆಲೆಯೇರಿಕೆಯಾಗಲು ಕೇಂದ್ರದ ಬಿಜೆಪಿ ಸರ್ಕಾರ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

2 hours ago

ಹೊಳಲ್ಕೆರೆ : ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ  ಜಾತ್ರೆ ಸಂಪನ್ನ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…

5 hours ago

ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…

5 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಲಸಿಕಾಕರಣ

ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…

6 hours ago

ರಂಗಭೂಮಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…

6 hours ago

ಚಿತ್ರದುರ್ಗ : ಯೂನಿಯನ್ ಪಾರ್ಕ್ ಬಳಿ ಅನಾಮಧೇಯ ಶವ ಪತ್ತೆ

ಚಿತ್ರದುರ್ಗ. ಏ.16:ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಯೂನಿಯನ್ ಪಾರ್ಕ್ ಬಳಿ, ಪುಟ್‍ಪಾತ್ ಮೇಲೆ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.…

6 hours ago