Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

---Advertisement---

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್ ಬದಲಾವಣೆಯ ಮಾಹಿತಿ ಸಿಕ್ಕಿದೆ.

ಕನ್ನಡಿಗ ರಾಹುಲ್ ದ್ರಾವಿಡ್ ಸದ್ಯ ಟೀಂ ಇಂಡಿಯಾದ ಕೋಚ್ ಆಗಿದ್ದಾರೆ. ಆದರೆ ಅವರ ಅವಧಿ ಜೂನ್ ತಿಂಗಳ ಒಳಗೆ ಅಂತ್ಯವಾಗುತ್ತಿದೆ. ಈ ಸಂಬಂಧ ಜಾಹೀರಾತು ನೀಡುವುದಾಗಿ ಹೇಳುತ್ತಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಮಾತನಾಡಿದ್ದು, ನೂತನ ಕೋಚ್ ಆಯ್ಕೆಗಾಗಿ ಬಿಸಿಸಿಐ ಈಗಾಗಲೇ ಜಾಹೀರಾತನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಮತ್ತೊಮ್ಮೆ ಕೋಚ್ ಆಗಬೇಕೆಂದು ಬಯಸಿದರೆ ಕೋಚ್ ರಾಹುಲ್ ದ್ರಾವಿಡ್ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಜಯ್ ಶಾ ಸ್ಪಷ್ಟಪಡಿಸಿದ್ದಾರೆ.

ಜಯ್ ಶಾ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಟಿ20 ವಿಶ್ವಕಪ್ ಗೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಇದೆ. ಹೀಗಿರುವಾಗ ಈಗ ಕೋಚ್ ಬದಲಾವಣೆ ಮಾಡುವುದು ಎಷ್ಟು ಸರಿ ಎಂಬುದು ಟೀಂ ಇಂಡಿಯಾ ಅಭಿಮಾನಿಗಳ ಪ್ರಶ್ನೆಯಾಗಿದೆ. ಅರ್ಜಿ ಸಲ್ಲಿಕೆಗೆ ಅವಕಾಶವಿರುವ ಕಾರಣ, ರಾಹುಲ್ ದ್ರಾವಿಡ್ ಅವರೇ ಕೋಚ್ ಆಗಿ ಮುಂದುವರೆಯುತ್ತಾರಾ ಅಥವಾ ವಿದೇಶಿಗರಿಗೆ ಮಣೆ ಹಾಕುತ್ತಾ ಎಂಬುದನ್ನು ಕಾದು ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...