Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೆಂಗಿನಕಾಯಿ ದರ ಏರಿಕೆ : ರೈತರಲ್ಲಿ ಮೂಡಿದ ಮಂದಹಾಸ..!

Facebook
Twitter
Telegram
WhatsApp

ಚಾಮರಾಜನಗರ: ತಾವೂ ಬೆಳೆದ ಬೆಲೆಗೆ ಉತ್ತಮ ಬೆಲೆ ಬಂದರೆ ರೈತರಿಗೆ ಅದಕ್ಕಿಂತ ಮತ್ತೊಂದು ಖುಷಿ ಇಲ್ಲ. ಎಷ್ಟೋ ಸಲ ನಷ್ಟವಾದರೂ ಬೆಳೆ ಬೆಳೆಯೋದನ್ನು ಮಾತ್ರ ಬಿಡುವುದಿಲ್ಲ. ಒಳ್ಳೆ ಬೆಲೆ ಬಂದರೆ ಸಾಲಸೋಲ ಮಾಡುವುದು ತಪ್ಪುತ್ತೆ ಎಂಬುದೇ ಸಂತಸದ ಸುದ್ದಿ. ಇದೀಗ ತೆಂಗು ಬೆಳೆಗಾರರಿಗೆ ಈಗ ಸಂತಸದ ಸುದ್ದಿ ಸಿಕ್ಕಿದೆ. ತೆಂಗಿನ ಬೆಲೆಯಲ್ಲಿ ಏರಿಕೆ ಕಂಡಿದೆ.

ಕಳೆದ ತಿಂಗಳಷ್ಟೇ ತೆಂಗಿನ ಬೆಲೆ 25 ರೂಪಾಗಿ ಇತ್ತು. ಇದೀಗ ತೆಂಗಿನ ಬೆಲೆ 50 ರೂಪಾತಿ ಆಗಿದೆ. ಎಳನೀರಿಗೆ ಬೇಡಿಕೆ ಇದ್ದ ಕಾರಣ ಬಹುತೇಕ ಮಂದಿ ತೆಂಗಿನಕಾಯಿಗಿಂತ ಎಳನೀರನ್ನೇ ಕಿತ್ತು ಮಾರಾಟ ಮಾಡುತ್ತಿದ್ದರು. ಹೀಗಾಗಿ ಇಳುವರಿ ಕುಂಠಿತವಾಗಿತ್ತು. ಇದಿಒಗ ತೆಂಗಿನಕಾಯಿಗೂ ಬೆಲೆ ಬಂದಿದೆ. ಜೊತೆಗೆ ಕೊಬ್ಬರಿ ಎಣ್ಣೆ ಹಾಗೂ ಕೊಬ್ಬರಿ ಪುಡಿಯ ದರವೂ ಏರಿಕೆಯಾಗಿದೆ‌. ಹೀಗಾಗಿ ತೆಂಗಿನಕಾಯಿ ದರವೂ ಹೆಚ್ಚಳವಾಗಿದೆ. ಇದಿ ರೈತರಿಗೆ ಖುಷಿಯೋ ಖುಷಿ.

ತೆಂಗಿನ ಬೆಳೆಗೆ ಆಗಾಗ ನುಸಿರೋಗ ಬಾಧಿಸುತ್ತಲೇ ಇರುತ್ತದೆ. ಅಲ್ಲದೇ ಕಟಾವಿಗೆ ಬಂದ ಸಂದರ್ಭದಲ್ಲಿ ಸಾಕಷ್ಟು ಖರ್ಚನ್ನು ಬೇಡುತ್ತದೆ. ಈ ನಡುವೆ ತಿಂಗಳೊಳಗೆ ತೆಂಗಿನಕಾಯಿ ಬೆಲೆ ದಾಖಲೆ ಬರೆದಿದೆ. ತೆರೆದ ಮಾರುಕಟ್ಟೆಯಲ್ಲಿ ಕೆ.ಜಿ.ತೆಂಗಿನಕಾಯಿ ಸದ್ಯ 50 ರೂ. ಇದ್ದು, ಇನ್ನು ಏರಿಕೆ ಕಾಣುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತೆಂಗಿನಕಾಯಿಯನ್ನು ಎಣ್ಣೆಯಲ್ಲದೇ ಪೌಡರ್‌ ಉದ್ದೇಶಕ್ಕೂ ಹೆಚ್ಚು ಬಳಸಲಾಗುತ್ತದೆ. ಜಿಲ್ಲೆಯ ತೆಂಗಿನಕಾಯಿ ರಾಜ್ಯದ ತುಮಕೂರು, ತಿಪಟೂರಿಗಲ್ಲದೇ ಹೊರರಾಜ್ಯಗಳಿಗೂ ಸಾಗಣೆಯಾಗುತ್ತದೆ. ಈಗ ತೆಂಗು ಬೆಳೆಗಾರರಿಗೆ ಸಮಾಧಾನ ತಂದಿದೆ. ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಉತ್ತಮ ಫಸಲು ಬರುವ ನಿರೀಕ್ಷೆಯೂ ರೈತರಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಸುಖಾಯು‌ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ಉಚಿತ ಆರೋಗ್ಯ ಸಲಹಾ ಶಿಬಿರವನ್ನು ನಗರದ ಸಾದಿಕ್ ನಗರದ ನಿವಾಸಿಗಳಿಗೆ ನಾಳೆ (ಸೆಪ್ಟೆಂಬರ್. 29 ರ ಭಾನುವಾರ)

ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ!

ಈ ರಾಶಿಯವರಿಗೆ ಕೈ ತುಂಬಾ ಹಣಪ್ರಾಪ್ತಿ. ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ! ಶನಿವಾರರಾಶಿ ಭವಿಷ್ಯ -ಸೆಪ್ಟೆಂಬರ್-28,2024 ಇಂದಿರಾ ಏಕಾದಶಿ ಸೂರ್ಯೋದಯ: 06:09, ಸೂರ್ಯಾಸ್ತ : 06:03 ಶಾಲಿವಾಹನ ಶಕೆ

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

error: Content is protected !!