Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

RCB ಅಭಿಮಾನಿಗಳಿಂದಾನೇ ಟೀಂ ಖರೀದಿಸಲು ಹಣ ಸಂಗ್ರಹ : ಹಾಗಾದ್ರೆ ಒಬ್ಬ ಅಭಿಮಾನಿ ಎಷ್ಟು ಹಣ ಹಾಕಬೇಕು..?

---Advertisement---

ಬೆಂಗಳೂರು: ಹರಾಜು ಪ್ರಕ್ರಿಯೆಯಲ್ಲಿ ಈ ಬಾರಿ ಆರ್ಸಿಬಿ ಎಡವಿದೆ ಎಂಬ ಬೇಸರ ಅಭಿಮಾನಿಗಳಿಗೆ ಕಾಡುವುದಕ್ಕೆ ಶುರುವಾಗಿದೆ. ಆ ಬೇಸರವನ್ನ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲೂ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿಯೇ ಆಟಗಾರರನ್ನು ಬಿಟ್ಟುಕೊಟ್ಟಿದೆ. ಇನ್ನು ಈ ಸಲವೂ ಕಪ್ ಗೆದ್ದಂಗೆ ಎಂಬ ಬೇಸವರನ್ನು ಹೊರ ಹಾಕಿದ್ದಾರೆ. ಇದರ ಬೆನ್ನಲ್ಲೇ ತಂಡವನ್ನು ನಾವೇ ಕೊಂಡುಕೊಂಡರೆ ಹೇಗೆ ಎಂಬ ಪ್ಲ್ಯಾನ್ ಕೂಡ ಹಾಕಿಕೊಂಡಿದ್ದಾರೆ. ಅದಕ್ಕೆ ಈಗ ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ಅಭಿಮಾನಿಗಳೇ ಸೇರಿ ಅಭಿಮಾನಿಗಳೇ ತಂಡ ತೆಗೆದುಕೊಳ್ಳುವ ಐಡಿಯಾ ಇದು.

ಈ ಬಗ್ಗೆ ಈಗಾಗಲೇ ಆಲ್ ಇಂಡಿಯಾ ಆರ್ಸಿಬಿ ಟೀಂ ಫ್ಯಾನ್ಸ್ ಅಸೋಸಿಯೇಷನ್ ಪೋಸ್ಟರ್ ಹಂಚುತ್ತಿದ್ದಾರೆ. ಈಗ ಮಂಡ್ಯದ ಮಳವಳ್ಳಿ ಅಭಿಮಾನಿಗಳ ಪೋಸ್ಟರ್ ವೈರಲ್ ಆಗಿದೆ. ಟೀಮೂ ನಮ್ದೆ.. ಕಪ್ಪು ನಮ್ಮದೇ ಎಂಬ ಘೋಷ ವಾಕ್ಯದೊಂದಿಗೆ ಈ ಪೋಸ್ಟರ್ ನ ಬಿಟ್ಟಿದ್ದಾರೆ.

ಈ ಬಾರಿಯ ಖರೀದಿಯಲ್ಲಿ ಕೆ.ಎಲ್.ರಾಹುಲ್ ಸೇರಿದಂತೆ ಒಳ್ಳೊಳ್ಳೆ ಆಟಗಾರರನ್ನ ಕೈಬಿಡಲಾಗಿದೆ. ಹೀಗಾಗಿ ಅಭಿಮಾನಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಇದು ಅಷ್ಟು ಸುಲಭದ ಕೆಲಸವಲ್ಲದೆ ಇದ್ದರು ಸಾಕಷ್ಟು ಗಮನ ಸೆಳೆಯುತ್ತಿದೆ. 10 ಲಕ್ಷ ಆರ್ಸಿಬಿ ಅಭಿಮಾನಿಗಳಿಂದ ತಲಾ 10 ಸಾವಿರ ರೂಪಾಯಿಯಂತೆ ಕಲೆಕ್ಟ್ ಮಾಡುವ ಪ್ಲ್ಯಾನ್ ಇದಾಗಿದೆ. ಈ ಮೂಲಕ ಸಾವಿರ ಕೋಟಿ ಹಣ ಸಂಗ್ರಹವಾಗುತ್ತದೆ. ಈ ಹಣದಲ್ಲಿ ತಮಗೆ ಬೇಕಾದ ಆಟಗಾರರನ್ನು ಕೊಂಡುಕೊಳ್ಳೋಣಾ ಅಂತಾನೇ ಅಭಿಮಾನಿಗಳು ಯೋಜನೆ ರೂಪಿಸಿದ್ದಾರೆ. ಒಂದು ವೇಳೆ ಇದು ಸಾಧ್ಯವಾಗಿ ಬಿಟ್ಟರೆ, ಹಣ ಸಂಗ್ರಹವೂ ಆಗಿ ಬಿಟ್ಟರೆ ಅಭಿಮಾನಗಳ ಸಂಭ್ರಕ್ಕೆ ಪಾರವೇ ಇರುವುದಿಲ್ಲ ನೋಡಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment