Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ ₹ 40,29,072  ಲಕ್ಷ ಸಂಗ್ರಹ

---Advertisement---

ಸುದ್ದಿಒನ್, ನಾಯಕನಹಟ್ಟಿ, ಅಕ್ಟೋಬರ್.06 : ಇತಿಹಾಸಿಕ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ದೇವಾಲಯದ ಆವರಣದಲ್ಲಿ ಕಂದಾಯ ಇಲಾಖೆ ಮತ್ತು ಕೆನರಾ ಬ್ಯಾಂಕ್ ಸಿಬ್ಬಂದಿಗಳು ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯಿತು.

ಮೊದಲು ಹೂರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ತಾಲೂಕು ಕಚೇರಿ ಹಾಗೂ ದೇವಾಲಯ ಕಾರ್ಯನಿರ್ವಾಣ ಅಧಿಕಾರಿಗಳ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಗೆ ಶುರುವಾದ ಎಣಿಕೆ ಕಾರ್ಯ ಮಧ್ಯಾಹ್ನ 12 ಗಂಟೆಗೆ ಮುಕ್ತಾಯವಾಯಿತು. ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ ಸಂಜೆ 6 ಕ್ಕೆ ಮುಕ್ತಾಯವಾಯಿತು.

ಹೊರಮಠದಲ್ಲಿ ₹6,62,132 ಲಕ್ಷ,  ಒಳಮಠದಲ್ಲಿ ₹. 30,94,200 ಲಕ್ಷ,  ದೇವಾಲಯದ ದಾಸೋಹ ₹2,72,740, ಮಂದಿರದ ಹುಂಡಿಯಲ್ಲಿ ಒಟ್ಟು ಸಂಗ್ರಹವಾದ ₹ 40,29,072 ಲಕ್ಷ ಸಂಗ್ರಹವಾಗಿದೆ.

ವರಮಠ ಮತ್ತು ಒಳ ಮಠ ಹುಂಡಿಯಲ್ಲಿ ಕೆಲವು ಬೆಳ್ಳಿ ನಾಣ್ಯಗಳು ಬೆಳ್ಳಿ ತೊಟ್ಟಿಲುಗಳು ಬೆಳ್ಳಿ ಆಭರಣಗಳು ಸಿಕ್ಕಿದ್ದು ವಿಶೇಷವಾಗಿತ್ತು. ಇನ್ನು ಇದೇ ವೇಳೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್. ಗಂಗಾಧರಪ್ಪ ಮಾತನಾಡಿ ಮಾನ್ಯ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಅವರ ಆದೇಶದ ಮೇರೆಗೆ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ದೇವಸ್ಥಾನದ ಹುಂಡಿ ಎಣಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ದೇವಾಲಯದ ಕಾರ್ಯ ನಿರ್ವಾಣ ಅಧಿಕಾರಿ ಎಚ್ ಗಂಗಾಧರಪ್ಪ,  ದೇವಸ್ಥಾನ ಸಿಬ್ಬಂದಿಗಳಾದ ಎಸ್. ಸತೀಶ್, ಮನು, ನಾಡಕಚೇರಿ ಉಪ ತಹಶೀಲ್ದಾರ್ ಬಿ. ಶಕುಂತಲಾ, ಆರ್. ಐ. ಚೇತನ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ, ಜಗದೀಶ್ ಶಂಕರ್, ಪುಷ್ಪಲತಾ, ಶರಣಬಸಪ್ಪ,  ಜೈರಾಮ್, ಕೆನರಾ ಬ್ಯಾಂಕ್ ವ್ಯವಸ್ಥಾಪಕರಾದ ರಾಮ್ ಮೋಹನ್, ಮತ್ತು ಸಿಬ್ಬಂದಿಗಳು, ಗ್ರಾಮ ಸಹಾಯಕರಾದ ಚನ್ನಬಸಪ್ಪ,ಓಬಣ್ಣ, ಹರೀಶ್, ಹೇಮಂತ್ ನಾಯ್ಕ, ಕುಮಾರ್, ನಾಗರಾಜ್, ಮುಂತಾದವರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...