ಚಿಕ್ಕಮಗಳೂರಿನಲ್ಲಿ ಕಾಲೇಜು ಬಸ್ ಭೀಕರ ಅಪಘಾತ : ಐದು ವಿದ್ಯಾರ್ಥಿಗಳು ಗಂಭೀರ..!

suddionenews
1 Min Read

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಲ್ಲಿ ನಡೆದಿದೆ. ಘಟನೆಯಲ್ಲಿ ಐದು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಬಸ್ ನಲ್ಲಿ ಹತ್ತು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಿದ್ದರು.

ವಿದ್ಯಾರ್ಥಿಗಳೆಲ್ಲಾ ರಜೆಯ ಖುಷಿಯಲ್ಲಿದ್ದರು. ಕಾಲೇಜಿನಿಂದ ಟ್ರಿಪ್ ಪ್ಲ್ಯಾನ್ ಮಾಡಿದ್ದರು. ಪಿಕ್ನಿಕ್ ಮುಗಿಸಿ ವಾಪಾಸ್ ಆಗುವಾಗ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ಬಸ್ ಅಪಘಾತಕ್ಕೀಡಾಗಿದೆ.

ಬಸ್ ನಲ್ಲಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಐವರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಚಿಕಿತ್ಸೆ ಕೂಡ ಕೊಡಿಸಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *