Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರಿನಿಂದ ಹಾಸ್ಯ ನಟ ಟೆನ್ನಿಸ್ ಕೃಷ್ಣ ಸ್ಪರ್ಧೆ..!

Facebook
Twitter
Telegram
WhatsApp

 

 

ತುಮಕೂರು: ಚುನಾವಣೆ ಸನಿಹವಾಗುತ್ತಿದೆ. ಇನ್ನು ಕೆಲವೇ ತಿಂಗಳಿನಲ್ಲಿ ಚುನಾವಣೆ ಎದುರಾಗಲಿದೆ. ಅದಕ್ಕಾಗಿ ಈಗಿನಿಂದಾನೇ ಮೂರು ಪಕ್ಷದ ಮುಖಂಡರು ಜನರ ನಡುವೆ ಸಂಚಾರ ಆರಂಭಿಸಿದ್ದಾರೆ, ಸಮಸ್ಯೆಗಳನ್ನು ಕೇಳುತ್ತಿದ್ದಾರೆ, ಭರವಸೆಗಳನ್ನು ನೀಡುತ್ತಿದ್ದಾರೆ. ಇದೀಗ ಟೆನ್ನಿಸ್ ಕೃಷ್ಣ ಕೂಡ ತಾವೂ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಹಾಸ್ಯ ನಟ ಟೆನ್ನಿಸ್ ಕೃಷ್ಣ ಕಳೆದ ಬಾರಿಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದರು. ಇದೀಗ ಅದೇ ಪಕ್ಷದಿಂದ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಸ್ಪರ್ಧೆಯ ಬಗ್ಗೆ ಅಧಿಕೃತವಾಗಿ ಅನೌನ್ಸ್ ಮಾಡಿದ್ದಾರೆ.

ತುಮಕೂರಿನ ತುರುವೆಕೆರೆ ವಿಧಾನಸಭಾ ಕ್ಷೇತ್ರದಿಂದ ಟೆನ್ನಿಸ್ ಕೃಷ್ನ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ತುಮಕೂರು ನಗರದಲ್ಲಿ ಮಾತನಾಡಿದ ಟೆನ್ನಿಸ್ ಕೃಷ್ಣ, ತುರುವೆಕೆರೆ ಕ್ಷೇತ್ರದಿಂದ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಬಡವರ ಪರವಾಗಿ ಏನಾದರೂ ಕೆಲಸ ಮಾಡಬಹುದು ಎಂದು ಬಂದಿದ್ದೇನೆ. ಈ ಪಕ್ಷ ಬೇರೆ ರಾಜ್ಯದಲ್ಲಿ ಕೆಲಸ ಮಾಡಿ ತೋರಿಸಿದೆ. ಕರ್ನಾಟಕದಲ್ಲಿ ಈಗ ಕರ್ನಾಟಕದಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!