Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಮ್ಯುನಿಸ್ಟ್ ಪಕ್ಷದಿಂದ ಸೂರಿಗಾಗಿ ಸಮರ : ನಗರಸಭೆ ಎದುರು ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 05 : ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಘಟಕದಿಂದ ಸೂರಿಗಾಗಿ ಸಮರ ನಗರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗೆ ಮನವಿ ಸಲ್ಲಿಸಲಾಯಿತು.

ನಗರದ ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಾರ್ಯಾಲಯದಿಂದ ಮೆರವಣಿಗೆ ಮೂಲಕ ನಗರಸಭೆಗೆ ಆಗಮಿಸಿದ ಪ್ರತಿಭಟನಾಕಾರರು ಬಡವರಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ ನಗರದಲ್ಲಿ ನಿವೇಶನ, ಮನೆಗಳಿಲ್ಲದೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡವರು ಜೀವಿಸುವುದು ಕಷ್ಟವಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ವಸತಿಗಾಗಿ ಹೋರಾಟ ನಡೆಸಿದ ಪ್ರತಿಫಲವಾಗಿ ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲಿಯೂ ಸರ್ವೆ ನಡೆಸಿ ನಿವೇಶನ ಮನೆ ಇಲ್ಲದವರನ್ನು ಗುರುತಿಸುವಂತೆ ರಾಜ್ಯದ ಮುಖ್ಯಮಂತ್ರಿ ಆದೇಶಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.
ಕಮ್ಯುನಿಸ್ಟ್ ತಾಲ್ಲೂಕು ಕಾರ್ಯದರ್ಶಿ ಟಿ.ಆರ್.ಉಮಾಪತಿ, ಸಹ ಕಾರ್ಯದರ್ಶಿಗಳಾದ ಈ.ಸತ್ಯಕೀರ್ತಿ, ಜಯದೇವಮೂರ್ತಿ, ಪರ್ವಿನ್‍ತಾಜ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...