Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗೆ ಪೈಪೋಟಿ : ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

Facebook
Twitter
Telegram
WhatsApp

ರಾಮನಗರ: ವಿಧಾನಸಭೆ ಚುನಾವಣೆಗೆ ಒಂಭತ್ತು ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಎಲ್ಲಾ ಪಕ್ಷಗಳು ಗೆಲ್ಲುವ ಪಣತೊಟ್ಟಿದ್ದಾರೆ. ಅದಕ್ಕಾಗಿಯೇ ಈಗಿನಿಂದಲೇ ತಯಾರಿ ನಡೆಸುತ್ತಿವೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ದೇವೇಗೌಡರು ಮತ್ತು ಕುಮಾರಣ್ಣಂಗೆ ಅವಕಾಶ ಕೊಟ್ಟಿದ್ದೀರಿ, ನನಗೂ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ಗುಂಡ್ಲುಪೇಟೆಯಲ್ಲೂ ಮಾತನಾಡಿದ್ದು, ನನಗೆ ಯಾರೂ ಅಭಿಮಾನಿ ಇಲ್ಲ. ನನಗೆ ಯಾವ ಬಣವೂ ಇಲ್ಲ. ನನ್ನದು ಒಂದೇ ಬಣ. ಅದು ಕಾಂಗ್ರೆಸ್ ಬಣ. ಸಿಎಂ ಆಗಬೇಕು ಎಂಬುದು ನನ್ನ ಆಸೆಯಲ್ಲ, ಕಾರ್ಯಕರ್ತರ ಆಸೆಯಾಗಿದೆ. ಅವರು ಇಷ್ಟಪಟ್ಟ ಕಾರ್ಯಕರ್ತರ ಹೆಸರನ್ನು ಕೂಗುತ್ತಾರೆ. ಅವರನ್ನು ತಡೆಯೋದಕ್ಕೆ ಆಗಲ್ಲ. ನಾನು ಸಾಕಷ್ಟು ಸಲ ಬೈದಿದ್ದೇನೆ ಎಂದಿದ್ದರು.

ಇದೀಗ ರಾಮನಗರದಲ್ಲಿ ಸಿಎಂ ಆಗುವ ಆಸೆಯನ್ನು ಮತ್ತಷ್ಟು ವ್ಯಕ್ತಪಡಿಸಿದ್ದು, ನಮ್ಮ ಪಕ್ಷದ ಅಭ್ಯರ್ಥಿಯನ್ನು ಇಲ್ಲಿಂದ ನಿಲ್ಲಿಸುತ್ತಿದ್ದೇವೆ. ಅವರನ್ನು ಗೆಲ್ಲಿಸಿ. ನನಗೆ ಹಾರ ಹಾಕುವುದು ಬೇಡ, ಅಭ್ಯರ್ಥಿಯನ್ನು ಗೆಲ್ಲಿಸಿ. ಚಾಮುಂಡಿ ನಮ್ಮ ನಾಡಿನ ದೇವತೆ. ನಿನ್ನೆ ಅಲ್ಲಿಯೂ ಬೇಡಿಕೊಂಡು ಬಂದಿದ್ದೇನೆ. ಈಗ ಇಲ್ಲಿಯೂ ಅದನ್ನೇ ಬೇಡಿಕೊಳ್ಳುತ್ತೇನೆ. ರಾಮನಗರದ ಜನತೆ ಎಲ್ಲರಿಗೂ ಅವಕಾಶ ಕೊಟ್ಟಿದ್ದೀರಿ. ನಮಗೂ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!