ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು ಮಾತನಾಡಿ, ಹಕವರಿಗೆ ಟಾಂಗ್ ಅನ್ನು ನೀಡಿದ್ದಾರೆ. ಮುಂದಿನ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೆ ಬಿವೈ ವಿಜಯೇಂದ್ರ ಅವರದ್ದೇ ಸಾರಥ್ಯ ಎಂದು ಹೇಳಿದ್ದಾರೆ.
ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯೋದು ಸತ್ಯ. ಅವರ ನೇತೃತ್ವದಲ್ಲಿಯೇ ಮುಂಬರುವ ತಾಲೂಜು, ಜಿಲ್ಲಾ ಹಾಗೂ ವಿಧಾನಸಭಾ ಚುನಾವಣೆಗಳನ್ನ ಎದುರಿಸುತ್ತೇವೆ ಎಂದಿದ್ದಾರೆ.
ಆದರೆ ಬಿಜೆಪಿಯಲ್ಲಿನ ಒಳ ಜಗಳ ಬೀದಿಗೆ ಬಂದು ನಿಂತಿದೆ. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇರವಾಗಿಯೇ ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ಹರಿಹಾಯುತ್ತಿದ್ದಾರೆ. ಈ ಬಗ್ಗೆ ಶಿಸ್ತು ಸಮಿತಿ ನೋಟೀಸ್ ಕೊಟ್ಟರೂ ಡೋಂಟ್ ಕೇರ್ ಎಂಬಂತೆ ವರ್ತಿಸುತ್ತಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ ಅವರು, ಯತ್ನಾಳ್ ಅವರದ್ದು ಲೂಸ್ ಟಾಕ್. ಬಿಜೆಪಿಯವರನ್ನು ನಿಂದಿಸುವುದೇ ಅವರ ಕೆಲಸವಾಗಿದೆ. ಪಕ್ಷದ ಮೇಲೆ ಅಭಿಮಾನವಿದ್ದಿದ್ದರೆ ಬೀದಿಯಲ್ಲಿ ನಿಂತು ಜಗಳವಾಡುತ್ತಿರಲಿಲ್ಲ.
ಬಿಜೆಪಿಯ ಶಿಸ್ತು ಸಮಿತಿ ನೋಟೀಸ್ ಕೊಟ್ಟಾಗ ಅದನ್ನೇ ಫೇಕ್ ಎಂದರು. ವಿಜಯೇಂದ್ರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ ಎಂದಿದ್ದಾರೆ. ಈ ಮೊದಲೆಲ್ಲಾ ಯತ್ನಾಳ್ ಅವರು ಬಿಎಸ್ವೈ ಫ್ಯಾಮಿಲಿ ಬಗ್ಗೆ ಮಾತಾಡ್ತಾ ಇದ್ರು. ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎನ್ನುತ್ತಿದ್ದರು. ಆದರೆ ಈಗ ಅವರ ಜೊತೆಗೆ ಬಣವೇ ಸೇರಿಕೊಂಡಿದೆ. ಒಂದಷ್ಟು ಜನ ವಿಜಯೇಂದ್ರ ವಿರುದ್ಧ ಕಿಡಿಕಾರುತ್ತಿದ್ದು, ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧೆಯೊಡ್ಡುತ್ತಿದ್ದಾರೆ. ಆದರೆ ಹೈಕಮಾಂಡ್ ಈ ಬಾರಿಯೂ ವಿಜಯೇಂದ್ರ ಅವರನ್ನೇ ಮುಂದುವರೆಸುವ ಮನಸ್ಸು ಮಾಡಿದೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್