Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಪೈಪೋಟಿ : ಸೋಮಣ್ಣ ಅಥವಾ ಮಾಧುಸ್ವಾಮಿ : ಯಾರಿಗೆ ಟಿಕೆಟ್..?

---Advertisement---

 

 

ತುಮಕೂರು: ಈಗಾಗಲೇ ಎಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಗರಿಗೆದರಿದೆ. ಸಿದ್ಧತೆಗಳು ನಡೆಯುತ್ತಿದ್ದು, ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ. ಈ ಬಾರಿಯ ಮತ್ತೊಂದು ವಿಶೇಷವೆಂದರೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಡು ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ. ತುಮಕೂರು ಲೋಕಸಭಾ ಕ್ಷೇತ್ರಕ್ಕೂ ಜೆಡಿಎಸ್ ಬೇಡಿಕೆ ಇಡುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿಯೇ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಪೈಪೋಟಿ ನಡೆಯುತ್ತಿದೆ.

ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯುತ್ತಾರಾ ಅಥವಾ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುತ್ತಾರಾ ಎಂಬುದು ಕೂಡ ಇನ್ನು ನಿರ್ಧಾರವಾಗಿಲ್ಲ. ಇದೆ ತಿಂಗಳ 20ರ ನಂತರ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ನಂತರವಷ್ಟೇ ಸ್ಪಷ್ಟತೆ ಸಿಗಲಿದೆ.

ಜೆಸಿ ಮಾಧುಸ್ವಾಮಿ ಅವರು ಕೂಡ ಈಗ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಅಖಾಡಕ್ಕೆ ಎಂಟ್ರಿಯಾಗಿದ್ದಾರೆ. ನಾನು ಕೂಡ ಅಭ್ಯರ್ಥಿಯ ಆಕಾಂಕ್ಷಿಯಾಗಿದ್ದೀನಿ, ಟಿಕೆಟ್ ಕೇಳಿದ್ದೀನಿ ಎಂದು ಹೇಳುವ ಮೂಲಕ ಲೋಕಸಭಾ ಚುನಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಮುದ್ದಹನುಮೇಗೌಡರು ಚುನಾವಣೆಯ ಹೊತ್ತಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾತಿದೆ. ಹೀಗಾಗಿಯೇ ಜೆಸಿ ಮಾಧುಸ್ವಾಮಿ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಬಿಜೆಪಿ ಪಾಳಯದಲ್ಲಿ ವಿ ಸೋಮಣ್ಣ ಅವರನ್ನೇ ತುಮಕೂರಿನಿಂದ ನಿಲ್ಲಿಸಬೇಕು ಎಂಬ ಯೋಚನೆಯಲ್ಲಿದೆ. ಬಿಎಸ್ ಯಡಿಯೂರಪ್ಪ ಅವರ ಬೆಂಬಲ ಇರುವ ಮಾಧುಸ್ವಾಮಿ ಅವರಿಗೆ ತುಮಕೂರಿನ ಬಿಜೆಪಿಯ ಒಂದು ತಂಡದ ಬೆಂಬಲವಿದೆ. ಈ ಎಲ್ಲಾ ಹಗ್ಗಜಗ್ಗಾಟದ ನಡುವೆ ಯಾರಿಗೆ ಹೈಕಮಾಂಡ್ ಟಿಕೆಟ್ ನೀಡಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಅದರಲ್ಲೂ ವಿ ಸೋಮಣ್ಣ ಅವರು ದೆಹಲಿಗೆ ಹೋಗಿ ಬಂದ ಮೇಲೆ ನಾನು ಕೂಡ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿರುವುದು, ಹೈಕಮಾಂಡ್ ನಿಂದಾನೇ ಬಂದ ಸೂಚನೆ ಆಗಿರಬಹುದಾ ಎಂಬ ಚರ್ಚೆಯನ್ನು ಹುಟ್ಟು ಹಾಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment