ಬಸವ ಜಯಂತಿ ಅಂಗವಾಗಿ ಅಲಂಕಾರಿಕ ರಾಸುಗಳ ಸ್ಪರ್ಧೆ : ಏನ್. ರಘುಮೂರ್ತಿ

ಚಳ್ಳಕೆರೆ, (ಮೇ.02) : ಬಸವ ಜಯಂತಿ ಅಂಗವಾಗಿ ತಾಲೂಕು ಆಡಳಿತ, ಚಳ್ಳಕೆರೆ ಮತ್ತು ಗ್ರಾಮ ಪಂಚಾಯತಿ ನನ್ನಿವಾಳ ಇವರ ಸಂಯುಕ್ತಾಶ್ರಯದಲ್ಲಿ ಅಲಂಕಾರಿಕ ರಾಸುಗಳ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಚಳ್ಳಕೆರೆ ತಹಶೀಲ್ದಾರ್ ಏನ್. ರಘುಮೂರ್ತಿ ತಿಳಿಸಿದ್ದಾರೆ.

ಗ್ರಾಮಾಂತರ ಪ್ರದೇಶದಲ್ಲಿ ವ್ಯವಸಾಯಕ್ಕೆ ಪೂರಕವಾಗಿ ರಾಸುಗಳನ್ನು ಉಪಯೋಗಿಸಲಾಗುತ್ತದೆ. ಇಂತಹ ರಾಸುಗಳನ್ನು ಗ್ರಾಮೀಣ ಪ್ರದೇಶದಲ್ಲಿ ಬಸವ ಜಯಂತಿಯ ದಿನ ಗೆಜ್ಜೆ ಕೋಡಣಸು ಜೋಲು ಬಣ್ಣ ಮತ್ತು ಬ್ಯಾಗಡಿ ಗಳೊಂದಿಗೆ ಅಲಂಕಾರ ಮಾಡಿ ಪೂಜಿಸಲಾಗುತ್ತದೆ. ಮತ್ತು
ಮೆರವಣಿಗೆಯಲ್ಲೂ ಕೂಡ ಗ್ರಾಮಗಳಲ್ಲಿ ಪ್ರದರ್ಶಿಸಲಾಗುತ್ತದೆ.

ಚಿತ್ರದುರ್ಗ ಜಿಲ್ಲೆಯ ಕೆಲವುಭಾಗಗಳು ಸಾಂಸ್ಕೃತಿಕವಾಗಿ ಶ್ರೀಮಂತ ಪ್ರದೇಶಗಳಾಗಿದ್ದು ಈ ಪ್ರದೇಶಗಳಲ್ಲಿ ಆಚರಿಸುವ ಇಂತಹ ಸ್ಪರ್ಧೆಗಳಿಗೆ ತಾಲೂಕಾಡಳಿತ ಪ್ರೋತ್ಸಾಹ ನೀಡಬೇಕಾಗುತ್ತದೆ.

ಸ್ಥಳಿಯ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಹಯೋಗದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಮತ್ತು ಅತ್ಯಂತ ಉನ್ನತ ಶ್ರೇಣಿಯಲ್ಲಿ ರಾಸುಗಳನ್ನು ಶೃಂಗಾರ ಮಾಡಿರುವಂತ ಸ್ಪರ್ಧಿಗಳಿಗೆ ಪ್ರಥಮ ಬಹುಮಾನ 5 ಸಾವಿರ ರೂ ಬಹುಮಾನ 2 ಸಾವಿರ ರೂಗಳನ್ನು ಘೋಷಿಸಲಾಗಿದೆ.

ಇದರಿಂದ ಸಹ ಪ್ರದೇಶದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಕೋಶದ ಪೋಷಿಸಿದಂತಾಗುತ್ತದೆ. ಕಾರ್ಯಕ್ರಮದಲ್ಲಿ ಚಳ್ಳಕ ಕ್ಷೇತ್ರದ ಶಾಸಕರಾದ ರಘು ಮೂರ್ತಿ ಭಾಗವಹಿಸಲಿದ್ದು, ಈ ವಿಜೇತರಾದ ರಾಸುಗಳಿಗೆ ಬಹುಮಾನ ನೀಡಲಿದ್ದಾರೆ.

ಈ ಭಾಗದ ರೈತರುಗಳು ತಮ್ಮ ರಾಸುಗಳನ್ನು ಅಲಂಕಾರಗೊಳಿಸಿ ಗ್ರಾಮೀಣ ಭಾಗದ ಈ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕಾಗಿ ಕೋರಿದ್ದಾರೆ. ಈ ಸಂದರ್ಭದಲ್ಲಿ ನನ್ನಿವಾಳ  ಗ್ರಾಮ ಪಂಚಾಯತ ಅಧ್ಯಕ್ಷರಾದಂತಹ ಬಸವರಾಜು ಮತ್ತು ಸದಸ್ಯರುಗಳು ಹಾಜರಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

56 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago