ಸಿಎಂ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡುವ ಮೂಲಕ ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟ್ ಹಾಕಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಖ್ಯಮಂತ್ರಿ ಚೀಫ್ ಮಿನಿಸ್ಟರ್ ಎಂಬ ಪೋಸ್ಟರ್ ಅನ್ನು, ಕಲೆಕ್ಷನ್ ಮಿನಿಸ್ಟರ್ ಎಂದು ಪೋಸ್ಟ್ ಹಾಕಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹರಿದು ಬಿಟ್ಟಿದ್ದರು.
ಈ ಸಂಬಂಧ ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ ಶೇಕರ್ ಕುಕ್ಕೇಡಿ ದೂರು ನೀಡಿದ್ದರು. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ರಾಜ್ಯದ ಮುಖ್ಯಮಂತ್ರಿಯನ್ನು ಅವಮಾನ ಮಾಡುವ ಉದ್ದೇಶದಿಂದ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ರೇಕಿಸಿ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಶಾಂತಿ ಕೆಡಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಕ್ಕೇಡಿ ದೂರಿನಲ್ಲಿ ತಿಳಿಸಿದ್ದಾರೆ.
ಸಿಎಂ ಕಚೇರಿ, ಗೃಹ ಕಚೇರಿ ಮತ್ತು ಸಿಎಂ ನಿವಾಸದ ಗೇಟ್ ಗೆ ಕಲೆಕ್ಷನ್ ಬೋರ್ಡ್ ಅಂಟಿಸಿರುವಂತೆ, ಫೋಟೋ ಎಡಿಟ್ ಮಾಡು ಹಾಕಲಾಗಿದೆ. ಈ ಫೋಟೋಗಳನ್ನು ಹರೀಶ್ ಪೂಂಜಾ ತಮ್ಮ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಹಂಚಿಕೊಂಡಿದ್ದಾರೆ. ಇದೀಗ ದೂರು ದಾಖಲಾಗಿದ್ದು, ಅವರ ಮೇಲೆ ದಾಖಲಾದ ಎರಡನೇಯ ಎಫ್ಐಆರ್ ಆಗಿದೆ. ಇತ್ತಿಚೆಗೆ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ, ತೆರವು ಜಟಾಪಟಿಯ ವಿಚಾರವಾಗಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…