Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾರುಖ್ ಖಾನ್ ಮಗ ಆರ್ಯನ್ ಖಾನ್ ವಿರುದ್ಧ ದೂರು : ಘಟನೆ ಬಗ್ಗೆ ವಿವರಿಸಿದ ಝೈದ್ ಖಾನ್

---Advertisement---

ಬೆಂಗಳೂರು: ಶಾರುಖ್ ಖಾನ್ ಮಗ ಆರ್ಯನ್ ಖಾನ್ ವಿವಾದಗಳ‌ ಮೂಲಕವೇ ಸುದ್ದಿಯಾದವರು. ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕೆಟ್ಟದಾಗಿ ಬೆರಳಿನ ಸನ್ನೆ ಮಾಡಿದ್ದರು. ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜನರಿಗೆ ಮಧ್ಯದ ಬೆರಳು ತೋರಿಸಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರ್ಯನ್ ಖಾನ್ ವಿರುದ್ಧ ಎಲ್ಲರೂ ಕೋಪ ಹೊರ ಹಾಕಿದ್ದರು. ಘಟನೆ ಸಂಬಂಧ ದೂರು ಕೂಡ ದಾಖಲಾಗಿತ್ತು. ಹುಸೇನ್ ಎಂಬುವವರು ಡಿಜಿ, ಐಜಿಪಿ ಮತ್ತು ಪೊಕೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.

ಆರ್ಯನ್ ಖಾನ್ ದುರ್ವರ್ತನೆ ತೋರಿದ್ದಾರೆ. ಮಹಿಳೆಯರಿಗೆ ಅಗೌರವ ತಂದಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಚಾಮರಾಜಪೇಟೆಯಲ್ಲಿ ಇದೇ ರೀತಿ ಪ್ರಕರಣವಾಗಿತ್ತು. ಆ ವೇಳೆ ಚಾಮರಾಜಪೇಟೆ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸಿ ತನಿಖೆ ಮಾಡಬೇಕು ಎಂದು ವಕೀಲರು ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ಝೈದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಆರ್ಯನ್ ಖಾನ್ ನನಗೆ ಹಲವು ವರ್ಚಗಳಿಂದ ಗೊತ್ತು. ನಾವಿಬ್ಬರೂ ಒಂದೇ ಕಡೆ ನಟನೆ ಕಲಿತಿದ್ದೇವೆ‌. ಅವನು ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದ. ಹೀಗಾಗಿ ಒಂದು ಓಪನಿಂಗ್ ಸೆರಮನಿಗೆ ಹೋಗಿದ್ದೆವು. ಅಲ್ಲಿ ನಾವೂ ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಜನ ಸೇರಿದ್ದರು. ಇಷ್ಟು ಜನರಿದ್ದರೆ ನನ್ನಿಂದ ಸಾಧ್ಯವಿಲ್ಲ ಎಂದು ಆರ್ಯನ್ ಹೇಳಿದ. ಅವನ ಮ್ಯಾನೇಜರ್ ಜನರನ್ನ ಚದುರಿಸುತ್ತೇನೆ ಎಂದು ಹೋದ. ಎಷ್ಟು ಹೊತ್ತಾದರೂ ಬರಲಿಲ್ಲ. ಆಗ ನಾವೂ ಬಾಲ್ಕನಿಗೆ ಹೋಗಿ ಏನಾಗಿದೆ ಎಂದು ನೋಡಿದೆವು. ಆಗ ಅವನು ಫ್ರೆಂಡ್ ಕಮ್ ಮ್ಯಾನೇಜರ್ ಗೆ ಆರ್ಯನ್ ಹಾಗೆ ತೋರಿಸಿದ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now