ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.13 : ಮಾರುಕಟ್ಟೆ ಮೌಲ್ಯಕ್ಕಿಂತ ಕಡಿಮೆ ಬೆಲೆಗೆ ಜಮೀನು ನಿವೇಶನಗಳನ್ನು ನೊಂದಣಿ ಮಾಡಿಸಿ ಸರ್ಕಾರದ ರಾಜಸ್ವಕ್ಕೆ ನಷ್ಟವುಂಟು ಮಾಡುತ್ತಿರುವ ಇಲ್ಲಿನ ಸಬ್ರಿಜಿಸ್ಟ್ರಾರ್ ಕಚೇರಿಯ ಉಪ ನೊಂದಣಾಧಿಕಾರಿ ಹಾಗೂ ಸಿಬ್ಬಂದಿಯವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಕ್ಕೆ ದೂರು ನೀಡಿರುವುದಾಗಿ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಪಿ.ಲೀಲಾಧರ ಠಾಕೂರ್ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಂಚಿಗನಹಾಳ್ ಸಮೀಪ ವಾಣಿಜ್ಯೋಪಯೋಗಕ್ಕಾಗಿ ಪರಿವರ್ತನೆಯಾಗಿರುವ 28 ಕೋಟಿ 31 ಲಕ್ಷ 40 ಸಾವಿರ ರೂ. ಬೆಲೆ ಬಾಳುವ ಜಮೀನನ್ನು ಕೇವಲ 2.25 ಕೋಟಿಗೆ ನೋಂದಣಿ ಮಾಡಿಸಲಾಗಿದೆ.
ಮಾರುಕಟ್ಟೆ ಮೌಲ್ಯವನ್ನು ನಿರ್ಧರಿಸಿ ನೊಂದಣಿಯಾಗಬೇಕು.
ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಉಪ ನೊಂದಣಾಧಿಕಾರಿ ಶ್ರೀಮತಿ ತುಳಸಿ ಲಕ್ಷ್ಮಿ ಹಾಗೂ ದಾಖಲಾತಿ ಪರಿಶೀಲಿಸುವ ಗುಮಾಸ್ತರು, ಸಿಬ್ಬಂದಿಯವರು ಸೇರಿಕೊಂಡು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮದಕರಿಪುರ ಗ್ರಾಮ ರಿ.ಸ.ನಂ. 16/31 ರಲ್ಲಿ 5.12 ಗುಂಟೆ ನಲವತ್ತು ಲಕ್ಷ ರೂ. ಬೆಲೆಬಾಳುವ ಜಮೀನು ಕೇವಲ ಒಂಬತ್ತು ಲಕ್ಷಕ್ಕೆ ನೊಂದಣಿಯಾಗಿದೆ. ಹಳೆರಂಗಾಪುರದಲ್ಲಿ ರಿ.ಸ.ನಂ. 7/34 ರಲ್ಲಿ ಏಳು ಲಕ್ಷ 32 ಸಾವಿರ 250 ರೂ. ಮೌಲ್ಯದ ಜಮೀನನ್ನು ಐದು ಲಕ್ಷ ರೂ.ಗಳಿಗೆ ನೊಂದಣಿ ಮಾಡಿಸಿ ಸರ್ಕಾರದ ಬೊಕ್ಕಸಕ್ಕೆ ಹಾನಿಯುಂಟು ಮಾಡಲಾಗಿದೆ.
ಇಂತಹ ಇನ್ನು ಅನೇಕ ಪ್ರಕರಣಗಳು ಸಬ್ರಿಜಿಸ್ಟ್ರಾರ್ ಕಚೇರಿಯಲ್ಲಿ ರಾಜಾರೋಷವಾಗಿ ನಡೆಯುತ್ತಿದೆ. ಯಾವುದೇ ಆಸ್ತಿ ನೊಂದಣಿ ಮಾಡುವಾಗ ಮಾರಾಟ ಮಾಡುವವರ ಹೆಸರಲ್ಲಿ ಖಾತೆಯಿರಬೇಕೆಂಬ ನಿಯಮವಿದೆ. ಎಲ್ಲವನ್ನು ಉಲ್ಲಂಘಿಸಿ ಸ್ಟಾಂಪ್ವೆಂಡರ್, ಸಹಾಯಕರನ್ನು ಕಚೇರಿಯಿಂದ ಹೊರಗಿಟ್ಟು ಬ್ರೋಕರ್ಗಳನ್ನು ಸುತ್ತ ಇಟ್ಟುಕೊಂಡು ಹೆಚ್ಚು ಬೆಲೆ ಬಾಳುವ ಜಮೀನು ನಿವೇಶನಗಳನ್ನು ಕಡಿಮೆ ಬೆಲೆಗೆ ನೊಂದಾಯಿಸಿ ಹಣ ಲಪಾಟಿಸುವ ಹಗರಣ ನಿರಂತರವಾಗಿ ನಡೆಯುತ್ತಿದೆ. ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪಿ.ಲೀಲಾಧರ ಠಾಕೂರ್ ಒತ್ತಾಯಿಸಿದರು.
ನಗರಸಭೆ ಮಾಜಿ ಸದಸ್ಯ ಬಿ.ಎಲ್.ರವಿಶಂಕರ್ಬಾಬು, ಮಲ್ಲಿಕಾರ್ಜುನ್, ರವಿಆಲಘಟ್ಟ, ಚಿತ್ರಶೇಖರಪ್ಪ, ರೇವಣ್ಣ ಮದಕರಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್