Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು : ಕಾರಣವೇನು ಗೊತ್ತಾ..?

---Advertisement---

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ ಸಿ ಎಸ್ ಸಿದ್ದರಾಜು ಎಂಬುವವರು ದೂರು ದಾಖಲಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ದಾಖಲು ಮಾಡಲಾಗಿದೆ.

 

2004, 2013, 2018ರ ಚುನಾವಣೆಯನ್ನು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಅದರಲ್ಲಿ 2004ರ ವಿಧಾನಾಭಾ ಚುನಾವಣೆಯಲ್ಲಿ ಕೇತಗಾನಹಳ್ಳಿಯಲ್ಲಿ 24 ಎಕರೆ ಜಮೀನು ಇರುವ ಬಗ್ಗೆ ಉಲ್ಲೇಖ ಮಾಡಲಾಗಿದೆ. 2008 ಹಾಗೂ 2013ರಲ್ಲಿ ಜೆಪಿ ನಗರದ ಮನೆಯನ್ನು ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ಕ್ಕೆ ಅದೇ ಮನೆಯನ್ನು 1995ರಲ್ಲಿ ಖರೀದಿಸಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ.

ಅನಿತಾ ಕುಮಾರಸ್ವಾಮಿ ಅವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲ ಪಡೆದಿರುವುದಾಗಿ ಹೇಳಿದ್ದಾರೆ. ಆದರೆ ಇದೇ ಕುಪೇಂದ್ರ ರೆಡ್ಡಿ, 2022ರಲ್ಲಿ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ತಿಳಿಸಿದ್ದಾರೆ. ಆಸ್ತಿಯ ವಿಚಾರದಲ್ಲಿ ತಮ್ಮ ಚಿಕ್ಕಮ್ಮ ಸಾವಿತ್ರಮ್ಮರವರಿಂದ ದಾನ ಪಡೆದಿರುವುದಾಗಿ ತಿಳಿಸಿದ್ದಾರೆ‌. ಸಾವಿತ್ರಮ್ಮರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ..? ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು ಎಂದು ಪ್ರಶ್ನಿಸಿದ್ದಾರೆ. ಈ ರೀತಿ ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೆ ವಂಚಿಸಿದ್ದಾರೆಂದು ಆರೋಪದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment