ಮಂಡ್ಯ: ಮದ್ದೂರಿನ ಗಣೇಶನ ಉತ್ಸವದ ಸಮಯದಲ್ಲಿ ಮಸೀದಿಯೊಳಗಿಂದ ಕಲ್ಲು ಬಂದಿದ್ದು, ವಾತಾವರಣವನ್ನೇ ಕಲುಷಿತ ಮಾಡಿದೆ. 200ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಸದ್ಯಕ್ಕೆ ವಾತಾವರಣ ತಿಳಿಯಾಗಿದೆ. ಆದರೆ ಈ ಮಸೀದಿ ಬಗ್ಗೆ ಈಗ ಸಾಕಷ್ಟು ಚರ್ಚೆಯಾಗ್ತಾ ಇದೆ. ಆ ಮಸೀದಿಯನ್ನೇ ಅಕ್ರಮವಾಗಿ ನಿರ್ಮಾಣ ಮಾಡಿರುವುದು ಎನ್ನಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಈಗಾಗಲೇ ಸಲ್ಲಿಕೆಯಾಗಿದೆ. ಅದರಲ್ಲೂ ಪ್ರಧಾನಿ ಮೋದಿ ಅವರಿಗೂ ಈ ಸಂಬಂಧ ದೂರು ಹೋಗಿದೆ.
ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಈ ಮಸೀದಿ ಅಕ್ರಮ ಎಂದು ಈಗಾಗಲೇ ಜಿಲ್ಲಾಡಳಿತ ಕಚೇರಿಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಪತ್ರದ ಮೂಲಕ ದೂರು ದಾಖಲಾಗಿದೆ. ಮಸೀದಿ ಮುಂದೆ ದೇವರ ಉತ್ಸವವಾಗಲಿ, ಮೆರವಣಿಗೆಯಾಗಲಿ ಹಾದು ಹೋಗಬಾರದೆಂಬ ನಿರ್ಬಂಧ ಹೇರಲಾಗಿದೆ. ಅಷ್ಟೇ ಅಲ್ಲ ಸತ್ತ ಹಿಂದೂಗಳ ಶವದ ಮುಂದೆ ಇಲ್ಲಿ ತಮಟೆಯನ್ನು ಬಾರಿಸುವಂತೆ ಇಲ್ಲ. ಆ ರೀತಿಯ ನಿರ್ಬಂಧ ಮಾಡಿದ್ದಾರೆಂದು ಅಲ್ಲಿನ ಸ್ಥಳೀಯರು ಆರೋಪಿಸಿದ್ದಾರೆ.
2025ರ ಜೂನ್ ತಿಂಗಳಿನಲ್ಲಷ್ಟೇ ಈ ಮಸೀದಿಯ ಉದ್ಘಾಟನೆಯಾಗಿತ್ತು. ಆ ಸಂದರ್ಭದಲ್ಲಿಯೇ ಇಲ್ಲಿ ಅಕ್ರಮವಾಗಿ ನಿರ್ಮಾಣ ಕಾರ್ಯ ನಡೆಯುತ್ತಿರುವ ಬಗ್ಗೆ ಸ್ಥಳೀಯರು, ದೂರು ನೀಡಿದ್ದರು. ಆಡಳಿತವನ್ನು ಎಚ್ಚರಿಸುವ ಕೆಲಸ ಆಗಿದೆ. ಮಸೀದಿಯೊಳಗೆ ಅಕ್ರಮ ಮದರಸಾ ನಡೆಸುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳು ಓಡಾಡುತ್ತಾರೆ. ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲಿನ ಮಸೀದಿಯೊಳಗಿನಿಂದ ಕಲ್ಲುಗಳು ತೂರಿಕೊಂಡು ಬಂದಿದ್ದು, ಆ ಸಮಯದಲ್ಲಿ ಲೈಟ್ಸ್ ಆಫ್ ಆಗಿತ್ತು. ಹೀಗಾಗಿ ತನಿಖೆ ನಡೆಸುವುದಕ್ಕೆ ಸ್ವಲ್ಪ ನಿಧಾನವಾಗುತ್ತಿದೆ. ಆದರೂ ಈ ಘಟನೆಗೆ ಸಂಬಂಧಿಸಿದಂತೆ 22 ಜನರನ್ನ ಅರೆಸ್ಟ್ ಮಾಡಲಾಗಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.









